22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯದ ವತಿಯಿಂದ ಮಹಿಳಾ ಮಂಡಲದಲ್ಲಿ ಸನ್ಮಾನಿಸಲಾಯಿತು. ಎರಡೂ ಸಂಸ್ಥೆಯ ಸದಸ್ಯರು ತಮ್ಮ ಗ್ರಾಮದವರಾದ ಲೋಕೇಶ್ವರಿಯವರ ವಿಶಿಷ್ಟ ಸಾಧನೆಯಿಂದ ಪಡೆದ ಈ ಪ್ರಶಸ್ತಿಗೆ ಅಭಿನಂದನೆ ಸಲ್ಲಿಸಿ, ತಮ್ಮಲ್ಲಿ ಓರ್ವರಾಗಿ ಎಲ್ಲ ಮಹಿಳಿಯರಿಗೆ ವಿವಿಧ ರೀತಿಯಲ್ಲಿ ಜಾತಿ, ಮತ, ಪಕ್ಷಭೇದ ಮರೆತು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ದೊರೆತ ಸನ್ಮಾನ ತಮಗೆ ದೊರೆತದ್ದು ಸಂತೋಷವಾಗಿದೆ ಎಂದು ತಿಳಿಸಿ ಶಾಲು ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಭಾರತಿ ಉಪಾಧ್ಯಕ್ಷೆ ರಮಾ ಎಸ್. ಪರಾಂಜಪೆ, ಕೋಶಾಧಿಕಾರಿ ಸಂಧ್ಯಾಕಿರಣ್, ಸದಸ್ಯರಾದ ಭವ್ಯಶ್ರೀ ಕೀರ್ತಿರಾಜ್, ಸೌಮ್ಯ, ರೋಸಮ್ಮ, ಲಿಸ್ಸಿ, ಶಿಭಾ, ವರದಾ ಭಾಯಿ, ವಸಂತಿ, ಡೀಕಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಶುಭಕೋರಿದರು. ಗ್ರಾಮಸ್ಥರ ಸಹಕಾರ ಹಾಗೂ ಪ್ರೋತ್ಸಾಹದಿಂದ ತನಗೆ ದೊರೆತ ಈ ಪ್ರಶಸ್ತಿಗೆ ತಾವೆಲ್ಲರೂ ಭಾಜನರು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

Related posts

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya
error: Content is protected !!