25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯದ ವತಿಯಿಂದ ಮಹಿಳಾ ಮಂಡಲದಲ್ಲಿ ಸನ್ಮಾನಿಸಲಾಯಿತು. ಎರಡೂ ಸಂಸ್ಥೆಯ ಸದಸ್ಯರು ತಮ್ಮ ಗ್ರಾಮದವರಾದ ಲೋಕೇಶ್ವರಿಯವರ ವಿಶಿಷ್ಟ ಸಾಧನೆಯಿಂದ ಪಡೆದ ಈ ಪ್ರಶಸ್ತಿಗೆ ಅಭಿನಂದನೆ ಸಲ್ಲಿಸಿ, ತಮ್ಮಲ್ಲಿ ಓರ್ವರಾಗಿ ಎಲ್ಲ ಮಹಿಳಿಯರಿಗೆ ವಿವಿಧ ರೀತಿಯಲ್ಲಿ ಜಾತಿ, ಮತ, ಪಕ್ಷಭೇದ ಮರೆತು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ದೊರೆತ ಸನ್ಮಾನ ತಮಗೆ ದೊರೆತದ್ದು ಸಂತೋಷವಾಗಿದೆ ಎಂದು ತಿಳಿಸಿ ಶಾಲು ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಭಾರತಿ ಉಪಾಧ್ಯಕ್ಷೆ ರಮಾ ಎಸ್. ಪರಾಂಜಪೆ, ಕೋಶಾಧಿಕಾರಿ ಸಂಧ್ಯಾಕಿರಣ್, ಸದಸ್ಯರಾದ ಭವ್ಯಶ್ರೀ ಕೀರ್ತಿರಾಜ್, ಸೌಮ್ಯ, ರೋಸಮ್ಮ, ಲಿಸ್ಸಿ, ಶಿಭಾ, ವರದಾ ಭಾಯಿ, ವಸಂತಿ, ಡೀಕಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಶುಭಕೋರಿದರು. ಗ್ರಾಮಸ್ಥರ ಸಹಕಾರ ಹಾಗೂ ಪ್ರೋತ್ಸಾಹದಿಂದ ತನಗೆ ದೊರೆತ ಈ ಪ್ರಶಸ್ತಿಗೆ ತಾವೆಲ್ಲರೂ ಭಾಜನರು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya
error: Content is protected !!