23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು.

ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜ ಬಾಂಧವರಿಗೆ ಹಲವಾರು ವಿಚಾರಗಳ ಮಾಹಿತಿಯನ್ನು ನೀಡುವುದರ ಜೊತೆಗೆ ಸೂಕ್ತವಾದ ಮಾರ್ಗದರ್ಶನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ (ಲಿ) ಕೊಟ್ಟಾರ ಚೌಕಿ ಮಂಗಳೂರು ಇದರ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ಮೂಡಬಿದಿರೆ ಇದರ ಮಾಲಕಿ ಶಾಂತಲಾ ಸೀತಾರಾಮ ಅಚಾರ್ಯ, ಬ್ರಹ್ಮಶ್ರೀ ಎನ್ ಕೇಶವ ಪುರೋಹಿತ್ ಮೂಡಬಿದಿರೆ ಭಾಗವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಶ್ರೀಧರ ಅಚಾರ್ಯ ಖಂಡಿಗ, ಅಧ್ಯಕ್ಷ ಸತೀಶ ಆಚಾರ್ಯ ಕೈರೋಳಿ, ಶ್ರೀ ಕಾಳಿಕಾಂಬ ಮಹಿಳಾ ಮಂಡಳಿ ಇದರ ಅಧ್ಯಕ್ಷೆ ಮಾಲತಿ ರತ್ನಾಕರ ಉಪಸ್ಥಿತ ರಿದ್ದರು .

ಸೀತಾರಾಮ ಆಚಾರ್ಯ ಸ್ವಾಗತಿಸಿದರು. ಸುಧಾಕರ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಸತೀಶ್ ಆಚಾರ್ಯ ಧನ್ಯವಾದವಿತ್ತರು. ಬಿ ಹರಿಶ್ಚಂದ್ರ ಆಚಾರ್ಯ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya
error: Content is protected !!