July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು.

ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜ ಬಾಂಧವರಿಗೆ ಹಲವಾರು ವಿಚಾರಗಳ ಮಾಹಿತಿಯನ್ನು ನೀಡುವುದರ ಜೊತೆಗೆ ಸೂಕ್ತವಾದ ಮಾರ್ಗದರ್ಶನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ (ಲಿ) ಕೊಟ್ಟಾರ ಚೌಕಿ ಮಂಗಳೂರು ಇದರ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ಮೂಡಬಿದಿರೆ ಇದರ ಮಾಲಕಿ ಶಾಂತಲಾ ಸೀತಾರಾಮ ಅಚಾರ್ಯ, ಬ್ರಹ್ಮಶ್ರೀ ಎನ್ ಕೇಶವ ಪುರೋಹಿತ್ ಮೂಡಬಿದಿರೆ ಭಾಗವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಶ್ರೀಧರ ಅಚಾರ್ಯ ಖಂಡಿಗ, ಅಧ್ಯಕ್ಷ ಸತೀಶ ಆಚಾರ್ಯ ಕೈರೋಳಿ, ಶ್ರೀ ಕಾಳಿಕಾಂಬ ಮಹಿಳಾ ಮಂಡಳಿ ಇದರ ಅಧ್ಯಕ್ಷೆ ಮಾಲತಿ ರತ್ನಾಕರ ಉಪಸ್ಥಿತ ರಿದ್ದರು .

ಸೀತಾರಾಮ ಆಚಾರ್ಯ ಸ್ವಾಗತಿಸಿದರು. ಸುಧಾಕರ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಸತೀಶ್ ಆಚಾರ್ಯ ಧನ್ಯವಾದವಿತ್ತರು. ಬಿ ಹರಿಶ್ಚಂದ್ರ ಆಚಾರ್ಯ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
error: Content is protected !!