July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ 27ನೇ ವಾರ್ಷಿಕೋತ್ಸವವನ್ನುಮಾ.22ರಂದು ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ.ಯವರು ನೆರವೇರಿಸಿದರು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರಕಾಶ್ ಪ್ರಭು ಮಾತನಾಡಿ ಸಿಯೋನ್ ಆಶ್ರಮದ ಕುರಿತು ತಾವೇ ರಚಿಸಿದ ಸುಂದರವಾದ ಕವಿತೆಯನ್ನು ಹಾಡಿ ವಾರ್ಷಿಕೋತ್ಸವಕ್ಕೆ ಶುಭಾಶಯಗಳನ್ನು ತಿಳಿಸಿ, ಅಶ್ರಮದ ಸೇವೆ ಶ್ಲಾಘನೀಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದ ಸ್ವಾಮಿಯವರು ಸಂಸ್ಥೆಯು ಬೆಳೆದು ಬಂದ ಹಾದಿಯನ್ನು ಸಂಕ್ಷಿಪ್ತವಾಗಿ ವಿವರಿಸಿ. ಪ್ರಸ್ತುತ ಕಾರ್ಯವೈಖರಿಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯೆ ಮೇರಿ ಯು.ಪಿ., ವೈದ್ಯಾಧಿಕಾರಿ ಡಾ. ಕಲಾಮಧು ಶೆಟ್ಟಿ, ಹಿತೈಷಿಗಳಾದ ಜೋಸೆಫ್ ಪಿ.ಪಿ., ಆಶ್ರಮದ ಫಲಾನುಭವಿಗಳಾದ ಶಶಿಧರ ಮತ್ತು ಐಶ್ವರ್ಯ ಉಪಸ್ಥಿತರಿದ್ದರು.

ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು ಮತ್ತು ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಲೆಕ್ಕಾಧಿಕಾರಿ ಸೌಮ್ಯ ಯು.ಪಿ.ಯವರು ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ಸ್ವಾಗತಿಸಿ, ಸಿಬ್ಬಂದಿ ಆಶಾ ಸುಧಾಕರ್ ವಂದಿಸಿದರು. ಸಿಬ್ಬಂದಿ ದಿನಾವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!