22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಹಿರಿಯ ಯಕ್ಷಗಾನ ಕಲಾವಿದರಾಗಿ ಮೆರೆದ ಕೆ. ಗೋವಿಂದ ಭಟ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ಅವರು ನಮ್ಮ ಧರ್ಮಸ್ಥಳ ಮೇಳದಲ್ಲೆ 54 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಅವರು, ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಕುರಿಯ ವಿಠಲಶಾಸ್ತ್ರಿ ಅವರಲ್ಲಿ ಯಕ್ಷಗಾನ ಹಾಗೂ ನಾಟ್ಯದಲ್ಲಿ ತರಬೇತಿ, ಮಾರ್ಗದರ್ಶನ ಪಡೆದು ಪ್ರಬುದ್ಧ ಕಲಾವಿದರಾಗಿ ಮೆರೆದರು. ಅವರ ಕೌರವ, ಬಾಹುಬಲಿ, ಇಂದ್ರಜಿತು, ಕರ್ಣ, ಅರ್ಜುನ, ದೇವೇಂದ್ರ ಮೊದಲಾದ ಪಾತ್ರಗಳು ಅವರಿಗೆ ವಿಶೇಷ ಮನ್ನಣೆ, ಗೌರವ ತಂದುಕೊಟ್ಟಿವೆ.

ಪುರಾಣ ಪ್ರಸಂಗಗಳು ಹಾಗೂ ಯಕ್ಷಗಾನ, ಧರ್ಮ, ಕಲೆ, ಸಾಹಿತ್ಯದ ಬಗ್ಯೆ ಆಳವಾದ ಅಧ್ಯಯನ ನಡೆಸಿದ ಅವರು ಅಪಾರ ಪಾಂಡಿತ್ಯ ಹಾಗೂ ಜ್ಞಾನವನ್ನು ಹೊಂದಿದ್ದರು. ಅವರ ಉತ್ತಮ ವಾಕ್‌ಚಾತುರ್ಯ, ಪ್ರೌಢ ಅಭಿನಯ, ಪ್ರಬುದ್ಧ, ವಿದ್ವತ್ಪೂರ್ಣ ಹಾಗೂ ಅರ್ಥಗರ್ಭಿತ ಮಾತುಗಳು ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿವೆ.

ಧರ್ಮಸ್ಥಳದಲ್ಲಿ ನಮ್ಮ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿ, ಗುರುಗಳಾಗಿ ಸೇವೆ ಸಲ್ಲಿಸಿದ ಅವರು ಪುರಾಣ ವಾಚನ-ಪ್ರವಚನ, ಭಜನಾ ತರಬೇತಿಯಲ್ಲಿಯೂ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡುತ್ತಿದ್ದರು.
ಅವರ ನಿಧನ ನಿಜವಾದ ಅರ್ಥದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವೇ ಆಗಿದೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya
error: Content is protected !!