September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಹಿರಿಯ ಯಕ್ಷಗಾನ ಕಲಾವಿದರಾಗಿ ಮೆರೆದ ಕೆ. ಗೋವಿಂದ ಭಟ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ಅವರು ನಮ್ಮ ಧರ್ಮಸ್ಥಳ ಮೇಳದಲ್ಲೆ 54 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಅವರು, ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಕುರಿಯ ವಿಠಲಶಾಸ್ತ್ರಿ ಅವರಲ್ಲಿ ಯಕ್ಷಗಾನ ಹಾಗೂ ನಾಟ್ಯದಲ್ಲಿ ತರಬೇತಿ, ಮಾರ್ಗದರ್ಶನ ಪಡೆದು ಪ್ರಬುದ್ಧ ಕಲಾವಿದರಾಗಿ ಮೆರೆದರು. ಅವರ ಕೌರವ, ಬಾಹುಬಲಿ, ಇಂದ್ರಜಿತು, ಕರ್ಣ, ಅರ್ಜುನ, ದೇವೇಂದ್ರ ಮೊದಲಾದ ಪಾತ್ರಗಳು ಅವರಿಗೆ ವಿಶೇಷ ಮನ್ನಣೆ, ಗೌರವ ತಂದುಕೊಟ್ಟಿವೆ.

ಪುರಾಣ ಪ್ರಸಂಗಗಳು ಹಾಗೂ ಯಕ್ಷಗಾನ, ಧರ್ಮ, ಕಲೆ, ಸಾಹಿತ್ಯದ ಬಗ್ಯೆ ಆಳವಾದ ಅಧ್ಯಯನ ನಡೆಸಿದ ಅವರು ಅಪಾರ ಪಾಂಡಿತ್ಯ ಹಾಗೂ ಜ್ಞಾನವನ್ನು ಹೊಂದಿದ್ದರು. ಅವರ ಉತ್ತಮ ವಾಕ್‌ಚಾತುರ್ಯ, ಪ್ರೌಢ ಅಭಿನಯ, ಪ್ರಬುದ್ಧ, ವಿದ್ವತ್ಪೂರ್ಣ ಹಾಗೂ ಅರ್ಥಗರ್ಭಿತ ಮಾತುಗಳು ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿವೆ.

ಧರ್ಮಸ್ಥಳದಲ್ಲಿ ನಮ್ಮ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿ, ಗುರುಗಳಾಗಿ ಸೇವೆ ಸಲ್ಲಿಸಿದ ಅವರು ಪುರಾಣ ವಾಚನ-ಪ್ರವಚನ, ಭಜನಾ ತರಬೇತಿಯಲ್ಲಿಯೂ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡುತ್ತಿದ್ದರು.
ಅವರ ನಿಧನ ನಿಜವಾದ ಅರ್ಥದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವೇ ಆಗಿದೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

Related posts

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!