ಬೆಳ್ತಂಗಡಿ: ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್.ಡಿ.ಎ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪನ್ವೇಲ್ ಶಾಸಕ ಪ್ರಶಾಂತ್ ಠಾಕೂರ್, ಕುಂಟಾರು ರವೀಶ್ ತಂತ್ರಿ, ಅಡ್ವೋಕೇಟ್ ಶ್ರೀಕಾಂತ್ ಇವರುಗಳು ರೋಡ್ ಶೋ ಯಶಸ್ವಿಗೆ ಸಾಥ್ ನೀಡಿದರು. ಈ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್, ಬೆಳ್ತಂಗಡಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಮಂಜುನಾಥ್ ಬೆಳ್ತಂಗಡಿ ಇವರುಗಳು ಸಾಥ್ ನೀಡಿದರು.












