24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ ಸೇತುವೆಯಲ್ಲಿ ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ನೀರಿಗೆ ಸುರಿಯುವುದರ ಬಗ್ಗೆ ಇತ್ತೀಚೆಗೆ ಸುದ್ದಿ ಉದಯ ಪತ್ರಿಕೆಯಲ್ಲಿ ಬಂದ ವರದಿ ನಂತರ ನಾವೂರು ಗ್ರಾಮ ಪಂಚಾಯತ್ ಎಚ್ಚರಿಕೆ ಫಲಕ ಜೊತೆಗೆ ಬಹುಮಾನ ದ ಫಲಕ ಅಳವಡಿಸಿದೆ.

ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ , ಹಾಳೆ ತಟ್ಟೆಗಳು , ಪ್ಲಾಸ್ಟಿಕ್ ಚೀಲಗಳು , ಬಾಟಲ್ ಗಳು , ಲೋಟಗಳು , ಬಿಯರ್ ಬಾಟಲ್ ಗಳು , ಮಕ್ಕಳು ಮತ್ತು ಹಾಸಿಗೆ ಹಿಡಿದಿರುವವರ ಪ್ಯಾಂಪರ್ಸ್ ಸೇರಿದಂತೆ ತ್ಯಾಜ್ಯ ವನ್ನು ಗೋಣಿಯಲ್ಲಿ ತಂದು ನಾವೂರು ಗ್ರಾಮದ ಕೈಕಂಬ ಸೇತುವೆಯಲ್ಲಿ ಸುರಿಯುತ್ತಿರುವ ಬಗ್ಗೆ ಇತ್ತೀಚೆಗಷ್ಟೇ ವರದಿ ಮಾಡಲಾಗಿತ್ತು. ಇದೀಗ ನಾವೂರು ಗ್ರಾಮ ಪಂಚಾಯತ್ ಕೈಕಂಬ ಸೇತುವೆ ಬಳಿ ನದಿಗೆ ತ್ಯಾಜ್ಯ ಎಸೆಯುವವರ ಬಗ್ಗೆ ದಾಖಲೆ ಸಮೇತ ಗ್ರಾಮ ಪಂಚಾಯತ್ ಗೆ ನೀಡಿದರೆ ಅಂತಹ ವ್ಯಕ್ತಿಗಳಿಗೆ 1000 ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಇನ್ನೂ ತ್ಯಾಜ್ಯ ಎಸೆಯುವವರ ಮೇಲೆ 5000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆಯ ಶಾಶ್ವತ ಫಲಕವನ್ನು ಅಳವಡಿಸಿದೆ. ರಾತ್ರಿ ಸಮಯದಲ್ಲಿ ನದಿಗೆ ತ್ಯಾಜ್ಯ ಎಸೆಯುವವರನ್ನು ತಡೆಯುವುದಾದರು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸುವವರಾರು ಎಂದು ಸಾರ್ವಜನಿಕರಲ್ಲಿ ಪ್ರಶ್ನೆ ಉದ್ಭವಿಸಿದೆ. ಗ್ರಾಮ ಪಂಚಾಯತ್ ಗಳು ಕಸ ಬಿಸಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಅಗತ್ಯವಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಮಾತ್ರ ಸ್ವಚ್ಛ ಭಾರತ ಪರಿಕಲ್ಪನೆ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾಧ್ಯ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!