September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಇತರರಾದ ಪ್ರಿಯಾ, ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಸಾಗರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya
error: Content is protected !!