23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಬೆಳ್ತಂಗಡಿ: ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಉಜಿರೆಯ ನಾಗರಾಜ ಕಾಂಪೌಂಡಿನ ಶ್ರೀಮಾತಾದಲ್ಲಿ ನಡೆಸುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು.

ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ, ಉಪಾಧ್ಯಕ್ಷ ಹರಿದಾಸ ಗಾಂಭೀರ, ನಾಟ್ಯ ಗುರುಗಳಾದ ಚಂದ್ರಶೇಖರ ಧರ್ಮಸ್ಥಳ ವೇದಿಕೆಯಲ್ಲಿ ಉಪಸ್ಥಿತರಿದ್ದು ಬ್ಯಾಗುಗಳನ್ನು ವಿತರಿಸಿ ಶುಭ ಹಾರೈಸಿದರು.

ಉಜಿರೆಯ ಬ್ರಹ್ಮಕಲಕೋತ್ಸವದಲ್ಲಿ ಕಲಿಕಾ ವಿದ್ಯಾರ್ಥಿಗಳು ಪ್ರದರ್ಶಿಸಿದ ಲೀಲಾ ಮೂರ್ತಿ ಜನಾರ್ದನ ಯಕ್ಷಗಾನ ಪ್ರದರ್ಶನದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಪೋಷಕರ ಪರವಾಗಿ ಬಾಸಮೆ ನಾರಾಯಣ ಭಟ್ ಮಾತನಾಡಿದರು. ನಾಟ್ಯಗುರುಗಳಾದ ಶ್ರೀ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಮತ್ತು ಮಧುಸೂದನ ಇವರನ್ನು ಗೌರವಿಸಲಾಯಿತು.

ಸಂಸ್ಥೆಯ ಟ್ರಸ್ಟಿಗಳಾದ ಸುರೇಶ ಕುದ್ರೆಂತ್ತಾಯ, ವಿದ್ಯಾಕುಮಾರ್ ಕಾಂಚೋಡು, ಕುಸುಮಾಕರ ಕೊತ್ತೋಡಿ, ಹರೀಶ ಕೊಳ್ತಿಗೆ, ಗುರುಪ್ರಸಾದ್ ಉಜಿರೆ, ಭವ್ಯ ಹೊಳ್ಳ, ಯಶೋಧರ ಇಂದ್ರ, ಕೌಶಿಕ್ ರಾವ್ ಮತ್ತು ಪೋಷಕರು ಉಪಸ್ಥಿತರಿದ್ದರು..
ಸಂಸ್ಥೆಯ ಸಂಚಾಲಕ ಮಹೇಶ್ ಕನ್ಯಾಡಿ ಸ್ವಾಗತಿಸಿ ಟ್ರಸ್ಟಿ ರವೀಂದ್ರ ಶೆಟ್ಟಿ ಬಳೆಂಜ ವಂದಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಉಪ್ಪಿನಂಗಡಿ: 70 ಅಡಿ ಆಳದ ಹೊಂಡಕ್ಕೆ ಬಿದ್ದ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!