25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಯುದ್ದ ಖಂಡಿಸಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ‌ ಪ್ರತಿಭಟನೆ

ಬೆಳ್ತಂಗಡಿ: ಇಡೀ ಜಗತ್ತಿನ‌ ತೈಲ ಉತ್ಪಾದನೆ, ವಿತರಣೆಯ ಸಂಪೂರ್ಣ ಹಿಡಿತ ತನ್ನ ಹಸ್ತ ಬರಲು ಅಮೇರಿಕ ನಡೆಸುವ ಈ ಅಕ್ರಮ ಯುದ್ದಗಳ ತಡೆಯಲು ಭಾರತ ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಯಾಧವ ಶೆಟ್ಟಿ ಅಗ್ರಹಿಸಿದರು.

ಅವರು ಇಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು , ಎಐಕೆಎಸ್, ಡಿ.ವೈಎಪ್‌.ಐ., ಜೆ.ಎಂ.ಎಸ್, ಡಿ.ಎಚ್.ಎಸ್. ಆದಿವಾಸಿ ಮೊದಲಾದ ಸಂಘಟನೆಗಳು ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುವ ಯುದ್ದ ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿ ಮಾತಾಡುತ್ತಿದ್ದರು.

ಸಿಐಟಿಯು ದ.ಕ. ಜಿಲ್ಲಾಧ್ಯಕ್ಷರಾದ ಬಿ.ಎಂ.ಭಟ್ ಮಾತಾಡುತ್ತಾ ಒಂದು ದೇಶ ಮತ್ತೊಂದು ದೇಶದ ಸಾರ್ವಭೌಮತೆಯ ಮೇಲೆ‌ ದಾಳಿ ನಡೆಸುವುದು ಅಮೇರಿಕಾದ ಸರ್ವಾದಿಕಾರಿ ನಡೆಯಾಗಿದೆ ಎಂದರು.‌

ಅಮೇರಿಕಾದ ಸರ್ವಾಧಿಕಾರಿ ನಡೆಯನ್ನು ಬೆಂಬಲಿಸುವುದು ಎಂದರೆ ಅದರ ಗುಲಾಮಗಿರಿಗೆ ಬಲಿಯಾದಂತೆ ಆಗಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರಿತುಕೊಂಡು ದೇಶದ ಸ್ವಾಬಿಮಾನದ ಗೌರವ ಉಳಿಸಬೇಕಿದೆ ಎಂದರು.

ಶ್ಯಾಮರಾಜ್ ಸ್ವಾಗತಿಸಿ, ಡಿ.ಎಚ್.ಎಸ್. ರಾಜ್ಯ ನಾಯಕಿ ಈಶ್ವರಿ ವಂದಿಸಿದರು. ಅಜಿ.ಎಂ.ಜೋಸ್, ಹಿರಿಯ ಮುಖಂಡರಾದ ಲಕ್ಷ್ಮಣ ಗೌಡ, ಜಯಶ್ರಿ, ಪುಷ್ಪ, ಮಹಿಳಾ ಮುಖಂಡರಾದ ಕಿರಣಪ್ರಭಾ , ಕುಮಾರಿ, ಡಿ.ವೈ.ಎಪ್.ಐ ಮುಖಂಡರಾದ ಅಭಿಷೇಕ್, ಆದಿವಾಸಿ ಸಂಘಟನೆಯ ಪ್ರವೀಣ್ ಎಂಕೆ. ಕಟ್ಟಡ ಸಂಘದ ಲೋಕೇಶ್, ಅಶ್ವಿತ, ಅಪ್ಸ, ಮೊದಲಾದವರು ಇದ್ದರು. ಕೊನೆಗೆ ತಹಶಿಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಆಗ್ರಹ ಪತ್ರ ನೀಡಲಾಯ್ತು.

Related posts

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya
error: Content is protected !!