25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

ಕಡಿರುದ್ಯಾವರ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಸಂಸ್ಕೃತಿಯವರು ೨೦೨೫ನೇ ವರ್ಷದ ಗೌರವ ಪ್ರಶಸ್ತಿ ನೀಡಿ ಗೌರವಿಸಿದ ಕಡಿರುದ್ಯಾವರ ಗ್ರಾಮದ ವಳಂಬ್ರ ಲೋಕೇಶ್ಚರಿ ವಿನಯಚಂದ್ರ ರವರಿಗೆ ಸ್ಥಳೀಯ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯದ ವತಿಯಿಂದ ಮಹಿಳಾ ಮಂಡಲದಲ್ಲಿ ಸನ್ಮಾನಿಸಲಾಯಿತು. ಎರಡೂ ಸಂಸ್ಥೆಯ ಸದಸ್ಯರು ತಮ್ಮ ಗ್ರಾಮದವರಾದ ಲೋಕೇಶ್ವರಿಯವರ ವಿಶಿಷ್ಟ ಸಾಧನೆಯಿಂದ ಪಡೆದ ಈ ಪ್ರಶಸ್ತಿಗೆ ಅಭಿನಂದನೆ ಸಲ್ಲಿಸಿ, ತಮ್ಮಲ್ಲಿ ಓರ್ವರಾಗಿ ಎಲ್ಲ ಮಹಿಳಿಯರಿಗೆ ವಿವಿಧ ರೀತಿಯಲ್ಲಿ ಜಾತಿ, ಮತ, ಪಕ್ಷಭೇದ ಮರೆತು ಸಲ್ಲಿಸಿದ ನಿಸ್ವಾರ್ಥ ಸೇವೆಗೆ ದೊರೆತ ಸನ್ಮಾನ ತಮಗೆ ದೊರೆತದ್ದು ಸಂತೋಷವಾಗಿದೆ ಎಂದು ತಿಳಿಸಿ ಶಾಲು ಸ್ಮರಣಿಕೆ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಭಾರತಿ ಉಪಾಧ್ಯಕ್ಷೆ ರಮಾ ಎಸ್. ಪರಾಂಜಪೆ, ಕೋಶಾಧಿಕಾರಿ ಸಂಧ್ಯಾಕಿರಣ್, ಸದಸ್ಯರಾದ ಭವ್ಯಶ್ರೀ ಕೀರ್ತಿರಾಜ್, ಸೌಮ್ಯ, ರೋಸಮ್ಮ, ಲಿಸ್ಸಿ, ಶಿಭಾ, ವರದಾ ಭಾಯಿ, ವಸಂತಿ, ಡೀಕಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು ಶುಭಕೋರಿದರು. ಗ್ರಾಮಸ್ಥರ ಸಹಕಾರ ಹಾಗೂ ಪ್ರೋತ್ಸಾಹದಿಂದ ತನಗೆ ದೊರೆತ ಈ ಪ್ರಶಸ್ತಿಗೆ ತಾವೆಲ್ಲರೂ ಭಾಜನರು ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

Related posts

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!