23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು.

ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜ ಬಾಂಧವರಿಗೆ ಹಲವಾರು ವಿಚಾರಗಳ ಮಾಹಿತಿಯನ್ನು ನೀಡುವುದರ ಜೊತೆಗೆ ಸೂಕ್ತವಾದ ಮಾರ್ಗದರ್ಶನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ (ಲಿ) ಕೊಟ್ಟಾರ ಚೌಕಿ ಮಂಗಳೂರು ಇದರ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ಮೂಡಬಿದಿರೆ ಇದರ ಮಾಲಕಿ ಶಾಂತಲಾ ಸೀತಾರಾಮ ಅಚಾರ್ಯ, ಬ್ರಹ್ಮಶ್ರೀ ಎನ್ ಕೇಶವ ಪುರೋಹಿತ್ ಮೂಡಬಿದಿರೆ ಭಾಗವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಶ್ರೀಧರ ಅಚಾರ್ಯ ಖಂಡಿಗ, ಅಧ್ಯಕ್ಷ ಸತೀಶ ಆಚಾರ್ಯ ಕೈರೋಳಿ, ಶ್ರೀ ಕಾಳಿಕಾಂಬ ಮಹಿಳಾ ಮಂಡಳಿ ಇದರ ಅಧ್ಯಕ್ಷೆ ಮಾಲತಿ ರತ್ನಾಕರ ಉಪಸ್ಥಿತ ರಿದ್ದರು .

ಸೀತಾರಾಮ ಆಚಾರ್ಯ ಸ್ವಾಗತಿಸಿದರು. ಸುಧಾಕರ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಸತೀಶ್ ಆಚಾರ್ಯ ಧನ್ಯವಾದವಿತ್ತರು. ಬಿ ಹರಿಶ್ಚಂದ್ರ ಆಚಾರ್ಯ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya
error: Content is protected !!