23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಹಿರಿಯ ಯಕ್ಷಗಾನ ಕಲಾವಿದರಾಗಿ ಮೆರೆದ ಕೆ. ಗೋವಿಂದ ಭಟ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ಅವರು ನಮ್ಮ ಧರ್ಮಸ್ಥಳ ಮೇಳದಲ್ಲೆ 54 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಅವರು, ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಕುರಿಯ ವಿಠಲಶಾಸ್ತ್ರಿ ಅವರಲ್ಲಿ ಯಕ್ಷಗಾನ ಹಾಗೂ ನಾಟ್ಯದಲ್ಲಿ ತರಬೇತಿ, ಮಾರ್ಗದರ್ಶನ ಪಡೆದು ಪ್ರಬುದ್ಧ ಕಲಾವಿದರಾಗಿ ಮೆರೆದರು. ಅವರ ಕೌರವ, ಬಾಹುಬಲಿ, ಇಂದ್ರಜಿತು, ಕರ್ಣ, ಅರ್ಜುನ, ದೇವೇಂದ್ರ ಮೊದಲಾದ ಪಾತ್ರಗಳು ಅವರಿಗೆ ವಿಶೇಷ ಮನ್ನಣೆ, ಗೌರವ ತಂದುಕೊಟ್ಟಿವೆ.

ಪುರಾಣ ಪ್ರಸಂಗಗಳು ಹಾಗೂ ಯಕ್ಷಗಾನ, ಧರ್ಮ, ಕಲೆ, ಸಾಹಿತ್ಯದ ಬಗ್ಯೆ ಆಳವಾದ ಅಧ್ಯಯನ ನಡೆಸಿದ ಅವರು ಅಪಾರ ಪಾಂಡಿತ್ಯ ಹಾಗೂ ಜ್ಞಾನವನ್ನು ಹೊಂದಿದ್ದರು. ಅವರ ಉತ್ತಮ ವಾಕ್‌ಚಾತುರ್ಯ, ಪ್ರೌಢ ಅಭಿನಯ, ಪ್ರಬುದ್ಧ, ವಿದ್ವತ್ಪೂರ್ಣ ಹಾಗೂ ಅರ್ಥಗರ್ಭಿತ ಮಾತುಗಳು ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿವೆ.

ಧರ್ಮಸ್ಥಳದಲ್ಲಿ ನಮ್ಮ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿ, ಗುರುಗಳಾಗಿ ಸೇವೆ ಸಲ್ಲಿಸಿದ ಅವರು ಪುರಾಣ ವಾಚನ-ಪ್ರವಚನ, ಭಜನಾ ತರಬೇತಿಯಲ್ಲಿಯೂ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡುತ್ತಿದ್ದರು.
ಅವರ ನಿಧನ ನಿಜವಾದ ಅರ್ಥದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವೇ ಆಗಿದೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

Related posts

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya
error: Content is protected !!