September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹಿರಿಯ ಯಕ್ಷಗಾನ ಕಲಾವಿದ ಕೆ. ಗೋವಿಂದ ಭಟ್ ನಿಧನಕ್ಕೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಹಿರಿಯ ಯಕ್ಷಗಾನ ಕಲಾವಿದರಾಗಿ ಮೆರೆದ ಕೆ. ಗೋವಿಂದ ಭಟ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ಅವರು ನಮ್ಮ ಧರ್ಮಸ್ಥಳ ಮೇಳದಲ್ಲೆ 54 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಅವರು, ಹಿರಿಯ ಯಕ್ಷಗಾನ ಕಲಾವಿದರಾಗಿದ್ದ ಕುರಿಯ ವಿಠಲಶಾಸ್ತ್ರಿ ಅವರಲ್ಲಿ ಯಕ್ಷಗಾನ ಹಾಗೂ ನಾಟ್ಯದಲ್ಲಿ ತರಬೇತಿ, ಮಾರ್ಗದರ್ಶನ ಪಡೆದು ಪ್ರಬುದ್ಧ ಕಲಾವಿದರಾಗಿ ಮೆರೆದರು. ಅವರ ಕೌರವ, ಬಾಹುಬಲಿ, ಇಂದ್ರಜಿತು, ಕರ್ಣ, ಅರ್ಜುನ, ದೇವೇಂದ್ರ ಮೊದಲಾದ ಪಾತ್ರಗಳು ಅವರಿಗೆ ವಿಶೇಷ ಮನ್ನಣೆ, ಗೌರವ ತಂದುಕೊಟ್ಟಿವೆ.

ಪುರಾಣ ಪ್ರಸಂಗಗಳು ಹಾಗೂ ಯಕ್ಷಗಾನ, ಧರ್ಮ, ಕಲೆ, ಸಾಹಿತ್ಯದ ಬಗ್ಯೆ ಆಳವಾದ ಅಧ್ಯಯನ ನಡೆಸಿದ ಅವರು ಅಪಾರ ಪಾಂಡಿತ್ಯ ಹಾಗೂ ಜ್ಞಾನವನ್ನು ಹೊಂದಿದ್ದರು. ಅವರ ಉತ್ತಮ ವಾಕ್‌ಚಾತುರ್ಯ, ಪ್ರೌಢ ಅಭಿನಯ, ಪ್ರಬುದ್ಧ, ವಿದ್ವತ್ಪೂರ್ಣ ಹಾಗೂ ಅರ್ಥಗರ್ಭಿತ ಮಾತುಗಳು ಪ್ರೇಕ್ಷಕರ ವಿಶೇಷ ಮೆಚ್ಚುಗೆಗೆ ಪಾತ್ರವಾಗಿವೆ.

ಧರ್ಮಸ್ಥಳದಲ್ಲಿ ನಮ್ಮ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿ, ಗುರುಗಳಾಗಿ ಸೇವೆ ಸಲ್ಲಿಸಿದ ಅವರು ಪುರಾಣ ವಾಚನ-ಪ್ರವಚನ, ಭಜನಾ ತರಬೇತಿಯಲ್ಲಿಯೂ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡುತ್ತಿದ್ದರು.
ಅವರ ನಿಧನ ನಿಜವಾದ ಅರ್ಥದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವೇ ಆಗಿದೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

Related posts

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!