25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.24 ರಂದು ನವದುರ್ಗಾ ಹೋಮ, ನವ ದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ 7ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಿ ಮೂರ್ತಿ ಬಲಿ ಉತ್ಸವ, ಪೂಜೆ, ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ಶ್ರೀ ಗುರುದೇವ ಮಠ ಟ್ರಸ್ಟಿ ಸುಜೀತಾ ವಿ. ಬಂಗೇರ, ಟ್ರಸ್ಟಿ ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ, ಶ್ರೀ ರಾಮ ಕ್ಷೇತ್ರ ಮಹಿಳಾ ಸಮಿತಿ ಸಂಚಾಲಕಿ ಸುಜಾತಾ ಅಣ್ಣಿ ಪೂಜಾರಿ, ಅಣ್ಣಿ ಪೂಜಾರಿ, ಇತರ ಗಣ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
error: Content is protected !!