September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ಗುರುವಾಯನಕೆರೆ: ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಬೆಂಗಳೂರಿನ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ಹೇಳಿದರು.

ಅವರು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮಕ್ಕಳು ನಮ್ಮ ದೇಶದ ಭವಿಷ್ಯ . ಅವರಿಗೆ ನಮ್ಮ ಸಂಸ್ಕೃತಿಯ ಅರಿವಿರಬೇಕು. ದೇಶೀಯ ಹಬ್ಬ ಹರಿದಿನಗಳ ಮಹತ್ವ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಎಲ್ಲಾ ಹಬ್ಬಗಳನ್ನು ನಾವು ಆಚರಿಸುತ್ತೇವೆ ಎಂದರು. .

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಅವರು ಯುಗಾದಿಯ ಸಂದೇಶ ನೀಡಿದರು. ಅತಿಥಿಗಳಾದ ನಾಗರಾಜ್ ಹಾಗೂ ಸುರೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಪ್ರಸ್ತಾವಿಕ ಮಾತನಾಡಿ,ಸ್ವಾಗತಿಸಿದರು.
ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿ, ವಂದಿಸಿದರು. ಸಮಾರಂಭದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಯುಗಾದಿ ಸಂಭ್ರಮದ ಸವಿನೆನಪಿಗೆ ಬೇವು ಬೆಲ್ಲ ನೀಡಲಾಯಿತು.

Related posts

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya
error: Content is protected !!