September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

ಬೆಳ್ತಂಗಡಿ: ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆಯವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿಗೆ ಟೋಲ್ ಗೇಟ್ ಬೇಡ . ಇದರ ವಿರುದ್ಧ ಪಕ್ಷತೀತವಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರ ಪಣಕಜೆ ಟೋಲ್ ಗೇಟ್ ನಿರ್ಮಾಣ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರಿಗೆ ಹೊರೆ ಈ ಯೋಜನೆ ಶಾಶ್ವತವಾಗಿ ರದ್ದಾಗಬೇಕು. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

40 ಕಿಲೋಮೀಟರ್ ಅಂತರದಲ್ಲಿ ಎರಡು ಟೋಲ್ ಗೇಟ್ ಇರಬಾರದು ಎಂದು ನಿಯಮ ಇದೆ. ಆ ನಿಯಮಗಳನ್ನು ಉಲ್ಲಂಘನೆ ಮಾಡಿ, ಪಣಕಜೆ ಬಳಿ ಅಕ್ರಮ ಟೋಲ್ ಪ್ಲಾಜಾ ನಿರ್ಮಾಣ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಣಕಜೆ ಟೋಲ್ ಗೇಟ್ ನಿರ್ಮಾಣ ಕಾರ್ಯ ಅನಧಿಕೃತವಾಗಿದ್ದು ಈ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ . ಈ ಬಗ್ಗೆ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಮಾಡಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!