23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಅನುದಾನದಡಿ ಕುಕ್ಕಳ ಗ್ರಾಮದ ಹಟ್ಟತ್ತೋಡಿಯಿಂದ ಕೆಂಪರಿಗೆಯವರೆಗೆ ರಸ್ತೆ– ರೂ.25.00 ಲಕ್ಷ, ಮಾಲಾಡಿ ಗ್ರಾಮದ ಪುರಿಯದಿಂದ ಕುರಿಯೋಡಿ ವರೆಗೆ ರಸ್ತೆ– ರೂ.25.00 ಲಕ್ಷ, ವೇಣೂರು ಗ್ರಾಮದ ಮೂಡ್ಲಾ ಕ್ರಾಸ್‌ನಿಂದ ನತ್ಯಟ್ಟವರೆಗೆ ರಸ್ತೆ – ರೂ.25.00 ಲಕ್ಷ, ನಾರಾವಿ ಗ್ರಾಮದ ದುಗಲಾಯಿ ಗುಡ್ಡೆ ರಸ್ತೆ – ರೂ.25.00 ಲಕ್ಷ, ಕಳೆಂಜ ಗ್ರಾಮದ ಬಂಡೇರಿಯಿಂದ ಬೇಂಗದಗಂಡಿವರೆಗೆ ರಸ್ತೆ – ರೂ.25.00 ಲಕ್ಷ, ನ್ಯಾಯತರ್ಪು ಗ್ರಾಮದ ಗೋವಿಂದೂರು ರಿಂದ ಕಣಿಯೂರು ಗ್ರಾಮದ ಕಾಪಿನಡ್ಕ -ಪೆರ್ದಡ್ಕ ರಸ್ತೆ – ರೂ.50.00 ಲಕ್ಷ, ಪಟ್ರಮೆ ಗ್ರಾಮದ ಮಣಿಯೇರು ರಸ್ತೆ – ರೂ.15.00 ಲಕ್ಷ, ಪಟ್ರಮೆ ಗ್ರಾಮದ ಓಟಕಜೆ ರಸ್ತೆ – ರೂ.10.00 ಲಕ್ಷ. ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ಉತ್ತಮ ರಸ್ತೆ ಸೌಲಭ್ಯ ಲಭ್ಯವಾಗಲಿದ್ದು, ದೈನಂದಿನ ಸಂಚಾರ ಮತ್ತು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
error: Content is protected !!