September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಅನುದಾನದಡಿ ಕುಕ್ಕಳ ಗ್ರಾಮದ ಹಟ್ಟತ್ತೋಡಿಯಿಂದ ಕೆಂಪರಿಗೆಯವರೆಗೆ ರಸ್ತೆ– ರೂ.25.00 ಲಕ್ಷ, ಮಾಲಾಡಿ ಗ್ರಾಮದ ಪುರಿಯದಿಂದ ಕುರಿಯೋಡಿ ವರೆಗೆ ರಸ್ತೆ– ರೂ.25.00 ಲಕ್ಷ, ವೇಣೂರು ಗ್ರಾಮದ ಮೂಡ್ಲಾ ಕ್ರಾಸ್‌ನಿಂದ ನತ್ಯಟ್ಟವರೆಗೆ ರಸ್ತೆ – ರೂ.25.00 ಲಕ್ಷ, ನಾರಾವಿ ಗ್ರಾಮದ ದುಗಲಾಯಿ ಗುಡ್ಡೆ ರಸ್ತೆ – ರೂ.25.00 ಲಕ್ಷ, ಕಳೆಂಜ ಗ್ರಾಮದ ಬಂಡೇರಿಯಿಂದ ಬೇಂಗದಗಂಡಿವರೆಗೆ ರಸ್ತೆ – ರೂ.25.00 ಲಕ್ಷ, ನ್ಯಾಯತರ್ಪು ಗ್ರಾಮದ ಗೋವಿಂದೂರು ರಿಂದ ಕಣಿಯೂರು ಗ್ರಾಮದ ಕಾಪಿನಡ್ಕ -ಪೆರ್ದಡ್ಕ ರಸ್ತೆ – ರೂ.50.00 ಲಕ್ಷ, ಪಟ್ರಮೆ ಗ್ರಾಮದ ಮಣಿಯೇರು ರಸ್ತೆ – ರೂ.15.00 ಲಕ್ಷ, ಪಟ್ರಮೆ ಗ್ರಾಮದ ಓಟಕಜೆ ರಸ್ತೆ – ರೂ.10.00 ಲಕ್ಷ. ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ಉತ್ತಮ ರಸ್ತೆ ಸೌಲಭ್ಯ ಲಭ್ಯವಾಗಲಿದ್ದು, ದೈನಂದಿನ ಸಂಚಾರ ಮತ್ತು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya
error: Content is protected !!