22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಅನುದಾನದಡಿ ಕುಕ್ಕಳ ಗ್ರಾಮದ ಹಟ್ಟತ್ತೋಡಿಯಿಂದ ಕೆಂಪರಿಗೆಯವರೆಗೆ ರಸ್ತೆ– ರೂ.25.00 ಲಕ್ಷ, ಮಾಲಾಡಿ ಗ್ರಾಮದ ಪುರಿಯದಿಂದ ಕುರಿಯೋಡಿ ವರೆಗೆ ರಸ್ತೆ– ರೂ.25.00 ಲಕ್ಷ, ವೇಣೂರು ಗ್ರಾಮದ ಮೂಡ್ಲಾ ಕ್ರಾಸ್‌ನಿಂದ ನತ್ಯಟ್ಟವರೆಗೆ ರಸ್ತೆ – ರೂ.25.00 ಲಕ್ಷ, ನಾರಾವಿ ಗ್ರಾಮದ ದುಗಲಾಯಿ ಗುಡ್ಡೆ ರಸ್ತೆ – ರೂ.25.00 ಲಕ್ಷ, ಕಳೆಂಜ ಗ್ರಾಮದ ಬಂಡೇರಿಯಿಂದ ಬೇಂಗದಗಂಡಿವರೆಗೆ ರಸ್ತೆ – ರೂ.25.00 ಲಕ್ಷ, ನ್ಯಾಯತರ್ಪು ಗ್ರಾಮದ ಗೋವಿಂದೂರು ರಿಂದ ಕಣಿಯೂರು ಗ್ರಾಮದ ಕಾಪಿನಡ್ಕ -ಪೆರ್ದಡ್ಕ ರಸ್ತೆ – ರೂ.50.00 ಲಕ್ಷ, ಪಟ್ರಮೆ ಗ್ರಾಮದ ಮಣಿಯೇರು ರಸ್ತೆ – ರೂ.15.00 ಲಕ್ಷ, ಪಟ್ರಮೆ ಗ್ರಾಮದ ಓಟಕಜೆ ರಸ್ತೆ – ರೂ.10.00 ಲಕ್ಷ. ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ಉತ್ತಮ ರಸ್ತೆ ಸೌಲಭ್ಯ ಲಭ್ಯವಾಗಲಿದ್ದು, ದೈನಂದಿನ ಸಂಚಾರ ಮತ್ತು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮರಿಯಾಂಬಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya
error: Content is protected !!