September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ನಟಿ,ನಿರೂಪಕಿ ಮತ್ತು ಉದ್ಯಮಿ ಸೌಜನ್ಯ ಹೆಗ್ಡೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಮಹಿಳೆಯರು ಕೌಟುಂಬಿಕ ವ್ಯವಸ್ಥೆಯ ಜೀವನವನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಇತ್ತೀಚಿಗಿನ ವರ್ಷಗಳಲ್ಲಿ ಮಹಿಳೆಯರು ಕಚೇರಿ ಹಾಗೂ ಮನೆ ಎರಡನ್ನೂ ಸಮರ್ಥವಾಗಿ ನಿರ್ವಹಿಸಬಲ್ಲರು. ಮಹಿಳಾ ವರ್ಗವು ಎಲ್ಲಾ ಕ್ಷೇತ್ರಗಳಲ್ಲೂ ಸಶಕ್ತಗೊಂಡಾಗ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗುತ್ತದೆ. ಈ ಸಬಲೀಕರಣದ ಜಾಗೃತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ನಿರಂತರವಾಗಿ ಪ್ರಗತಿ ಹಾದಿಯತ್ತ ಸಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪನ್ಯಾಸಕ ಡಾ. ಗಿರೀಶ್ ಕುಮಾರ್ ವಹಿಸಿದ್ದರು.

ಬಳಿಕ ಕಾರ್ಯಕ್ರಮದ ಭಾಗವಾಗಿ, ಮಹಿಳೆಯರ ವೈಯಕ್ತಿಕ ಬೆಳವಣಿಗೆ ಮತ್ತು ಸಬಲೀಕರಣವನ್ನು ಕೇಂದ್ರವಾಗಿರಿಸಿ ಒಂದು ದಿನದ ನಾಯಕತ್ವ ಮತ್ತು ಸಂವಹನಾತ್ಮಕ ಗೋಷ್ಠಿಗಳನ್ನು ಸೌಜನ್ಯ ಹೆಗ್ಡೆ ಹಾಗೂ ಪ್ರೀತಮ್ ಪೊನ್ನಪ್ಪ ರವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಸಂಯೋಜಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಅನುಷಾ ಬಿ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ಶುಭಾರಾಣಿ ವಂದಿಸಿದರು.

Related posts

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಬಂಗಾಡಿ ಮತ್ತು ಬೆಳ್ತಂಗಡಿ ವಲಯ ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!