22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

ಬೆಳ್ತಂಗಡಿ: ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪ ಟೋಲ್ ಗೇಟ್ ನಿರ್ಮಾಣಕ್ಕೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆಯವರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿಗೆ ಟೋಲ್ ಗೇಟ್ ಬೇಡ . ಇದರ ವಿರುದ್ಧ ಪಕ್ಷತೀತವಾಗಿ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರ ಪಣಕಜೆ ಟೋಲ್ ಗೇಟ್ ನಿರ್ಮಾಣ ಪ್ರಸ್ತಾವನೆಯನ್ನು ಕೂಡಲೇ ಹಿಂಪಡೆಯಬೇಕು. ಜನಸಾಮಾನ್ಯರಿಗೆ ಹೊರೆ ಈ ಯೋಜನೆ ಶಾಶ್ವತವಾಗಿ ರದ್ದಾಗಬೇಕು. ಬೇಡಿಕೆ ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

40 ಕಿಲೋಮೀಟರ್ ಅಂತರದಲ್ಲಿ ಎರಡು ಟೋಲ್ ಗೇಟ್ ಇರಬಾರದು ಎಂದು ನಿಯಮ ಇದೆ. ಆ ನಿಯಮಗಳನ್ನು ಉಲ್ಲಂಘನೆ ಮಾಡಿ, ಪಣಕಜೆ ಬಳಿ ಅಕ್ರಮ ಟೋಲ್ ಪ್ಲಾಜಾ ನಿರ್ಮಾಣ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಣಕಜೆ ಟೋಲ್ ಗೇಟ್ ನಿರ್ಮಾಣ ಕಾರ್ಯ ಅನಧಿಕೃತವಾಗಿದ್ದು ಈ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ . ಈ ಬಗ್ಗೆ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ಮಾಡಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Related posts

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya
error: Content is protected !!