22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದ ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಅನುದಾನದಡಿ ಕುಕ್ಕಳ ಗ್ರಾಮದ ಹಟ್ಟತ್ತೋಡಿಯಿಂದ ಕೆಂಪರಿಗೆಯವರೆಗೆ ರಸ್ತೆ– ರೂ.25.00 ಲಕ್ಷ, ಮಾಲಾಡಿ ಗ್ರಾಮದ ಪುರಿಯದಿಂದ ಕುರಿಯೋಡಿ ವರೆಗೆ ರಸ್ತೆ– ರೂ.25.00 ಲಕ್ಷ, ವೇಣೂರು ಗ್ರಾಮದ ಮೂಡ್ಲಾ ಕ್ರಾಸ್‌ನಿಂದ ನತ್ಯಟ್ಟವರೆಗೆ ರಸ್ತೆ – ರೂ.25.00 ಲಕ್ಷ, ನಾರಾವಿ ಗ್ರಾಮದ ದುಗಲಾಯಿ ಗುಡ್ಡೆ ರಸ್ತೆ – ರೂ.25.00 ಲಕ್ಷ, ಕಳೆಂಜ ಗ್ರಾಮದ ಬಂಡೇರಿಯಿಂದ ಬೇಂಗದಗಂಡಿವರೆಗೆ ರಸ್ತೆ – ರೂ.25.00 ಲಕ್ಷ, ನ್ಯಾಯತರ್ಪು ಗ್ರಾಮದ ಗೋವಿಂದೂರು ರಿಂದ ಕಣಿಯೂರು ಗ್ರಾಮದ ಕಾಪಿನಡ್ಕ -ಪೆರ್ದಡ್ಕ ರಸ್ತೆ – ರೂ.50.00 ಲಕ್ಷ, ಪಟ್ರಮೆ ಗ್ರಾಮದ ಮಣಿಯೇರು ರಸ್ತೆ – ರೂ.15.00 ಲಕ್ಷ, ಪಟ್ರಮೆ ಗ್ರಾಮದ ಓಟಕಜೆ ರಸ್ತೆ – ರೂ.10.00 ಲಕ್ಷ. ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಸಮುದಾಯದ ಜನರಿಗೆ ಉತ್ತಮ ರಸ್ತೆ ಸೌಲಭ್ಯ ಲಭ್ಯವಾಗಲಿದ್ದು, ದೈನಂದಿನ ಸಂಚಾರ ಮತ್ತು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Related posts

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya
error: Content is protected !!