25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

ಬೆಳ್ತಂಗಡಿ:ಇತಿಹಾಸ ಪ್ರಸಿದ್ದ ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 04ರವರೆಗೆ ವಾರ್ಷಿಕ ಸಿರಿ ಜಾತ್ರೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಕೆ.ಎಂ. ನಾಗೇಶ್ ಕುಮಾರ್ ಗೌಡ ಮಾಹಿತಿ ನೀಡಿದರು.

ಬೆಳ್ತಂಗಡಿಯಲ್ಲಿ ಮಾ 24ರಂದು ನಡೆದ ಸುದ್ದಿಗೊಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾರ್ಚ್ 31ನೇ ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ದೇವತಾ ಕಾರ್ಯಗಳು ರಾತ್ರಿ ದೈವಗಳ ನೇಮೋತ್ಸವ, ಏ.1ನೇ ಬುಧವಾರ ಬೆಳಿಗ್ಗೆ ಶ್ರೀ ದೇವರ ಉತ್ಸವ, ಭಜನಾ ಸಂಕಿರ್ತನೆ ಉದ್ಘಾಟನೆ, ರಾತ್ರಿ ಅಬ್ಬಗ-ದಾರಗರ ಚೆನ್ನೆಮಣೆ ಆಟ, ಪ್ರಧಾನದೈವ ನೇಮೋತ್ಸವ ಏ.2ನೇ ಗುರುವಾರ ಬೆಳಿಗ್ಗೆ ನಾಗದರ್ಶನ ಸೇವೆ ದೇವರ ಉತ್ಸವ ರಾತ್ರಿ 7 ರಿಂದ ವಾರ್ಷಿಕ ನಡ್ವಾಲ್ ಸಿರಿಜಾತ್ರೆ ಹಾಗೂ ರಾತ್ರಿ 8 ಧಾರ್ಮಿಕ ಸಭೆ ರಾತ್ರಿ 10 ಗಂಟೆಗೆ ಚೈತನ್ಯ ಕಲಾವಿದರು ಬೈಲೂರು ಇವರಿಂದ ರಾಘು ಮಾಸ್ಟು ನಾಟಕ ನಡೆಯಲಿದೆ. ಅಲ್ಲದೆ, ಈ ಬಾರಿ 30 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಅವರು ಮಾತನಾಡಿ ಉಜಿರೆ ಸಮೀಪ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ನಿಸರ್ಗ ರಮಣೀಯವಾಗಿ ಕಂಗೊಳಿಸುತ್ತಿರುವ ಕ್ಷೇತ್ರವೇ ಇತಿಹಾಸ ಪ್ರಸಿದ್ದ ಸತ್ಯನಾಪುರದ ಸತ್ಯೋದ ಸಿರಿಗಳ ಮೂಲ ಆಲಡೆ ಕ್ಷೇತ್ರ ನಾಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನ. ಇತಿಹಾಸದ ಪ್ರಕಾರ ಸಂತಾನವಿಲ್ಲದ ಬೇಸರದಲ್ಲಿ ಕೊರಗುತ್ತಿದ್ದ ಸತ್ಯನಾಪುರದ ಅರಮನೆಯ ಅಜ್ಜರಿಗೆ ಬ್ರಾಹ್ಮಣ ರೂಪದಲ್ಲಿ ಪ್ರತ್ಯಕ್ಷವಾದ ಇಲ್ಲಿನ ಬೆರ್ಮರು ಪಾಳುಬಿದ್ದ ಈ ಕ್ಷೇತ್ರವನ್ನು ನವೀಕರಣಗೊಳಿಸು ನಿನಗೆ ಸಂತಾನ ಪ್ರಾಪ್ತಿಯಾಗುತ್ತದೆ ಅಂತ ಹೇಳಿ ಮಾಯವಾದರು. ಅದರಂತೆಯೇ ಈ ಕ್ಷೇತ್ರವನ್ನು ನವೀಕರಣಗೊಳಿಸಿದ ಅಜ್ಜರಿಗೆ ಇಲ್ಲಿನ ಬೆರ್ಮರು ಕೊಟ್ಟಂತಹ ಹಿಂಗಾರ ಪ್ರಸಾಧವೇ ಮಗುವಾಗಿ ಜನ್ಮತಾಳಿತು ನಂತರ ಈ ಮಗುವೆ ತುಳುನಾಡಿನ ಸತ್ಯೋದ ಸಿರಿಯಾಗಿ ಪ್ರಸಿದ್ದಿ ಪಡೆಯಿತು ಅಂತ ಇಲ್ಲಿನ ಇತಿಹಾಸ ಹೇಳುತ್ತದೆ ಎಂದರು.

ಈಗಲೂ ಕೂಡ ಸಂತಾನ ಪ್ರಾಪ್ತಿಯಾಗದವರು ಈ ಕ್ಷೇತ್ರಕ್ಕೆ ಹರಕೆ ಹೇಳಿಕೊಂಡರೆ ಸಂತಾನ ಪ್ರಾಪ್ತಿಯಾಗುತ್ತದೆ ಅನ್ನುವ ನಂಬಿಕೆ ಭಕ್ತರಲ್ಲಿದೆ. ತುಳುನಾಡಿನ ಹೆಚ್ಚಿನ ಕುಟುಂಬಗಳಿಗೆ ಅಲಡೆ ಕ್ಷೇತ್ರವಾದ ಈ ದೇವಸ್ನಾನಕ್ಕೆ ನಾಡಿನಾದ್ಯಂತ ಹೆಚ್ಚಿನ ಭಕ್ತರಿದ್ದಾರೆ, ಪ್ರತಿ ವರ್ಷದಂತೆ ಈ ವರ್ಷವು ಕೂಡ ಸುಗ್ಗಿ ಹುಣ್ಣಿಮೆಗೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ ಆಯನೋತ್ಸವಾದಿಗಳು ಬಹಳ ವಿಜೃಂಭಣೆಯಿಂದ ನಡೆಯುತ್ತದೆ ಎಂದರು.

ಇದೇ ಬರುವ ತಾರೀಖು 31/03/2026 ನೇ ಮಂಗಳವಾರದಿಂದ 04/04/2026 ನೇ ಶನಿವಾರದವರೆಗೆ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ ನಡೆಯಲಿದೆ. ಶ್ರೀ ದೇವರಿಗೆ ಬಲಿ ಉತ್ಸವ, ಕುಮಾರದರ್ಶನ, ಅಬ್ಬಗ ದಾರಗರ ಚನ್ನೆಮಣೆ ಆಟ, ಕ್ಷೇತ್ರದ ಪ್ರಧಾನ ದೈವ ಸೇಮಕಲ್ಲ ಪಂಜುರ್ಲಿ ದೈವಕ್ಕೆ ನೇಮೋತ್ಸವ, ವಾರ್ಷಿಕ ನಡಾಲ್ ಸಿರಿ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ ಎಂದರು.

ನಾಡಿನಾದ್ಯಂತ ಸಾವಿರಾರು ಭಕ್ತರು ಈ ಸಂಧರ್ಭದಲ್ಲಿ ಸಿರಿ ಜಾತ್ರೋತ್ಸವಕ್ಕೆ ಆಗಮಿಸಿ ಪುನೀತರಾಗುತ್ತಾರೆ, ಮುಖ್ಯ ಗರ್ಭಗುಡಿಯಲ್ಲಿ ಪ್ರಧಾನವಾಗಿ ಸ್ವಯಂಭೂ ಲಿಂಗ ಶ್ರೀ ಲೋಕನಾಥೇಶ್ವರ (ಬೆರ್ಮರು) ದೇವರು, ಪ್ರದಾನ ದೇವರ ಎಡ ಬಾಗದಲ್ಲಿ ಶ್ರೀ ದೇವಿ (ಸತ್ಯೋದ ಸಿರಿ) ಹಾಗೂ ಬಲಬಾಗದಲ್ಲಿ ಸುಬ್ರಹ್ಮಣ್ಯ (ಕುಮಾರ) ಹಾಗೂ ಗಣವತಿ, ದುರ್ಗಾದೇವಿಯ ಗುಡಿಗಳಿವೆ, ದೇವಸ್ಥಾನದ ಮುಂಬಾಗ ಶ್ರೀ ದೇವರ ಭಂಟ ತುಳುನಾಡಿನ ಕಾರಣಿಕದ ದೈವ ಸೇಮಕಲ್ಲ ಪಂಜುರ್ಲಿ ಗುಡಿ ಇದೆ. ಈ ದೈವಕ್ಕೆ ವರ್ಷಂಪ್ರತಿ ಜಾತ್ರಾ ಸಂದರ್ಭದಲ್ಲಿ ನೇಮೋತ್ಸವ ನಡೆಯುತ್ತದೆ, ದೇವಸ್ಥಾನದ ಬಲಬಾಗದಲ್ಲಿ ನಾಗಬ್ರಹ್ಮರ ಸನ್ನಿದಿ ಇದೆ ಇಲ್ಲಿ ಜಾತ್ರಾ ಸಂಧರ್ಭದಲ್ಲಿ ಶ್ರೀ ನಾಗಬ್ರಹ್ಮರಿಗೆ ನಾಗದರ್ಶನ ಸೇವೆ ಕೂಡ ನಡೆಯುತ್ತದೆ. ತುಳುನಾಡಿನ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಆ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಾರೆ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಹರಕೆ ರೂಪದಲ್ಲಿ ವಿಶೇಷವಾಗಿ ಇಲ್ಲಿನ ಶಕ್ತಿಗಳಿಗೆ ಬಲಿವಾಡು ಸಾಮಗ್ರಿಗಳಾದ ಹುರುಳಿ, ಅಕ್ಕಿ, ತೆಂಗಿನಕಾಯಿ, ಹಿಂಗಾರ, ಎಳ್ಳೆಣ್ಣೆ ಶಿಯಾಳ ಹಾಗೂ ಪುಂಡಿ ಪಣವೂ ಹರಕೆ ಕಾಣಿಕೆ ಅರ್ಪಿಸುತ್ತಾರೆ ಎಂದರು.

ವಿಶೇಷವಾಗಿ ಪವಿತ್ರವಾದ ನೇತ್ರಾವತಿ ನದಿಯ ದಡದಲ್ಲಿಯೇ ಇರುವಂತಹ ಅಪರೂಪದ ಕ್ಷೇತ್ರವಾದ ಇಲ್ಲಿಗೆ ನಾಡಿನ ಎಲ್ಲಾ ಭಕ್ತರು ಆಗಮಿಸಿ ಈ ಅಪರೂಪದ ಕಾರಣಿಕ ಕ್ಷೇತ್ರದ ಶಕ್ತಿಯ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ ಎಂದರು.

ಪ್ರತಿಕಾಗೊಷ್ಟಿಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸಾದ್ ಕುಮಾರ್ ಏಣೀರು,ಜಾತ್ರೋತ್ಸವ ಸಮಿತಿ ಪ್ರಧಾನ ಸಂಚಾಲಕ ಪಾಂಡುರಂಗ ಮರಾಠೆ ಹಡೀಲು, ಸದಸ್ಯ ಸಂತೋಷ್ ಗೌಡ,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಯಶೋಧರ ಗೌಡ ಕೊಡ್ಡೋಲು ಉಪಸ್ಥಿತರಿದ್ದರು.

Related posts

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya
error: Content is protected !!