25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

ಬೆಳ್ತಂಗಡಿ: ಹೆಣ್ಣು, ಪುರುಷರ ಬಾಳಲ್ಲಿ ತಾಯಿಯಾಗಿ, ಸಹೋದರಿಯಾಗಿ, ಸಂಗಾತಿಯಾಗಿ ಅವನ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾಳೆ. ಪುರುಷ ಪ್ರಧಾನವಾದ ಸಮಾಜದಲ್ಲಿ ಒರ್ವ ಮಹಿಳೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಕಷ್ಟಕರ. ಆದರೂ ಸಮಾಜದಲ್ಲಿ ಸಾಧನೆಯೊಂದಿಗೆ ಪುರುಷರಷ್ಟೇ ಮಹಿಳೆಯರೂ ಸರಿ ಸಮಾನರು ಎಂದು ಈಗಾಗಲೇ ಹಲವಾರು ಮಹಿಳೆಯರು ನಿರೂಪಿಸಿರುವುದು ಷ್ಲಾಘನೀಯ ಕಾರ್ಯ. ಇಂತಹಾ ಮಹಿಳೆಯರ ಮಹಿಳೆಯರ ಸಾಧನೆಗಳನ್ನು ಕೊಂಡಾಡಲು, ಅವಳ ಕೊಡುಗೆಗಳನ್ನು ಸ್ಮರಿಸಲು, ಲಿಂಗ ಸಮಾನತೆನ್ನು ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅತೀ ಅವಶ್ಯವಾಗಿದೆ ಎಂದು ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್. ಹೇಳಿದರು.

ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕು ವಕೀಲರ ಭವನದಲ್ಲಿ ವಕೀಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಎಲ್ಲಿ ಸ್ತಿçÃಯರು ಗೌರವಿಸಲ್ಪಡುತ್ತಾರೊ ಅಲ್ಲಿ ದೇವತೆಗಳು ಸಂತುಷ್ಟಾರಾಗಿರುತ್ತಾರೆ, ಎಲ್ಲಿ ಸ್ತ್ರೀಯರನ್ನು ಅವಮಾನಗೊಳಿಸಲಾಗುತ್ತದೆಯೋ ಅಲ್ಲಿ ಮಾಡಿದ ಕಾರ್ಯಗಳೆಲ್ಲ ವ್ಯರ್ಥ ಎಂಬ ಮಾತು ಭಾರತಿಯ ಪರಂಪರೆಯಲ್ಲಿ ಮಹಿಳೆಯ ಸ್ಥಾನಮಾನವನ್ನು ಸೂಚಿಸುತ್ತದೆ. ಇಲ್ಲಿರುವ ವಕೀಲೆಯರು ಪ್ರತಿ ದಿನ ಕಚೇರಿಗೆ ಆಗಮಿಸುವ ಮುನ್ನ ತಾಯಿಯಾಗಿ ಮಕ್ಕಳ ಬೇಕು ಬೇಡಗಳನ್ನು ಪೊರೈಸಿ, ಪ್ರಕೃತಿದತ್ತವಾದ ದೈಹಿಕ ಸಮಸ್ಯೆಗಳನ್ನು ನಿಭಾಯಿಸಬೇಕಾಗುತ್ತದೆ. ಇದಕ್ಕಾಗಿ ಎಲ್ಲಾ ಮಹಿಳಾ ವಕೀಲರು ಅಭಿನಂದನೀಯರು. ನನಗೂ ನನ್ನ ವೃತ್ತಿಯಲ್ಲಿ ಪುರುಷ ಸಮಾನವಾಗಿ ಕರ್ತವ್ಯವನ್ನು ನಿರ್ವಹಿಸಿಕೊಂಡು ಬಂದಿರಲು ಪ್ರೊತ್ಸಾಹ ನೀಡಿರುವ ನನ್ನ ಕುಟುಂಬದ ಸದಸ್ಯರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್., ಹಿರಿಯ ವಕೀಲೆ ಸ್ವರ್ಣಲತಾ ಎ., ಆರ್ ಸುಭಾಷಿಣಿ ಹಾಗೂ ಬೆಳ್ತಂಗಡಿ ವಕೀಲರ ಸಂಘದಿAದ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ ಶಿವಲಿಂಗಪ್ಪ ಜಿ. ಅವರನ್ನು ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಮನು ಬಿ.ಕೆ., ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಕೋಶಾಧಿಕಾರಿ ಮಲ್ತಾಜ್ ಬೇಗಂ ಉಪಸ್ಥಿತರಿದ್ದರು. ಯುವ ವಕೀಲೆ ಹೇಮಲತಾ ಹಾಗೂ ಪ್ರತೀಕ್ಷಾ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿ ಸೌಮ್ಯ ಸ್ವಾಗತಿಸಿ, ಮಲ್ತಾಜ್ ಬೇಗಂ ವಂದಿಸಿದರು.

Related posts

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya
error: Content is protected !!