July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ನಟಿ,ನಿರೂಪಕಿ ಮತ್ತು ಉದ್ಯಮಿ ಸೌಜನ್ಯ ಹೆಗ್ಡೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಮಹಿಳೆಯರು ಕೌಟುಂಬಿಕ ವ್ಯವಸ್ಥೆಯ ಜೀವನವನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಇತ್ತೀಚಿಗಿನ ವರ್ಷಗಳಲ್ಲಿ ಮಹಿಳೆಯರು ಕಚೇರಿ ಹಾಗೂ ಮನೆ ಎರಡನ್ನೂ ಸಮರ್ಥವಾಗಿ ನಿರ್ವಹಿಸಬಲ್ಲರು. ಮಹಿಳಾ ವರ್ಗವು ಎಲ್ಲಾ ಕ್ಷೇತ್ರಗಳಲ್ಲೂ ಸಶಕ್ತಗೊಂಡಾಗ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗುತ್ತದೆ. ಈ ಸಬಲೀಕರಣದ ಜಾಗೃತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ನಿರಂತರವಾಗಿ ಪ್ರಗತಿ ಹಾದಿಯತ್ತ ಸಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪನ್ಯಾಸಕ ಡಾ. ಗಿರೀಶ್ ಕುಮಾರ್ ವಹಿಸಿದ್ದರು.

ಬಳಿಕ ಕಾರ್ಯಕ್ರಮದ ಭಾಗವಾಗಿ, ಮಹಿಳೆಯರ ವೈಯಕ್ತಿಕ ಬೆಳವಣಿಗೆ ಮತ್ತು ಸಬಲೀಕರಣವನ್ನು ಕೇಂದ್ರವಾಗಿರಿಸಿ ಒಂದು ದಿನದ ನಾಯಕತ್ವ ಮತ್ತು ಸಂವಹನಾತ್ಮಕ ಗೋಷ್ಠಿಗಳನ್ನು ಸೌಜನ್ಯ ಹೆಗ್ಡೆ ಹಾಗೂ ಪ್ರೀತಮ್ ಪೊನ್ನಪ್ಪ ರವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಸಂಯೋಜಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಅನುಷಾ ಬಿ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ಶುಭಾರಾಣಿ ವಂದಿಸಿದರು.

Related posts

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya
error: Content is protected !!