23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘Give to Gain’ ಎಂಬ ವಿಷಯದಡಿಯಲ್ಲಿ ಮಹಿಳೆಯರಿಗೆ ನಾಯಕತ್ವ ಮತ್ತು ಸಂವಹನಾತ್ಮಕ ಚಟುವಟಿಕೆಗಳ ಮೂಲಕ ಸಬಲೀಕರಣದ ಜಾಗೃತಿ ಮೂಡಿಸುವುದರೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ನಟಿ,ನಿರೂಪಕಿ ಮತ್ತು ಉದ್ಯಮಿ ಸೌಜನ್ಯ ಹೆಗ್ಡೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ, ಮಹಿಳೆಯರು ಕೌಟುಂಬಿಕ ವ್ಯವಸ್ಥೆಯ ಜೀವನವನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಇತ್ತೀಚಿಗಿನ ವರ್ಷಗಳಲ್ಲಿ ಮಹಿಳೆಯರು ಕಚೇರಿ ಹಾಗೂ ಮನೆ ಎರಡನ್ನೂ ಸಮರ್ಥವಾಗಿ ನಿರ್ವಹಿಸಬಲ್ಲರು. ಮಹಿಳಾ ವರ್ಗವು ಎಲ್ಲಾ ಕ್ಷೇತ್ರಗಳಲ್ಲೂ ಸಶಕ್ತಗೊಂಡಾಗ ಮಹಿಳಾ ದಿನಾಚರಣೆ ಅರ್ಥಪೂರ್ಣವಾಗುತ್ತದೆ. ಈ ಸಬಲೀಕರಣದ ಜಾಗೃತಿ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ, ನಿರಂತರವಾಗಿ ಪ್ರಗತಿ ಹಾದಿಯತ್ತ ಸಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪನ್ಯಾಸಕ ಡಾ. ಗಿರೀಶ್ ಕುಮಾರ್ ವಹಿಸಿದ್ದರು.

ಬಳಿಕ ಕಾರ್ಯಕ್ರಮದ ಭಾಗವಾಗಿ, ಮಹಿಳೆಯರ ವೈಯಕ್ತಿಕ ಬೆಳವಣಿಗೆ ಮತ್ತು ಸಬಲೀಕರಣವನ್ನು ಕೇಂದ್ರವಾಗಿರಿಸಿ ಒಂದು ದಿನದ ನಾಯಕತ್ವ ಮತ್ತು ಸಂವಹನಾತ್ಮಕ ಗೋಷ್ಠಿಗಳನ್ನು ಸೌಜನ್ಯ ಹೆಗ್ಡೆ ಹಾಗೂ ಪ್ರೀತಮ್ ಪೊನ್ನಪ್ಪ ರವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಸಂಯೋಜಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಅನುಷಾ ಬಿ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ಶುಭಾರಾಣಿ ವಂದಿಸಿದರು.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಉದ್ಘಾಟನೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!