ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಡಾ. ಅಖಿಲ ತೇಜಸ್ವಿ ಆರ್. ಅವರು ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ “ಫ್ರೇಮ್ವರ್ಕ್ ಆನ್ ಅಕ್ಸೆಲೆರೇಟಿಂಗ್ ಇಮೇಜ್ ಅನಾಲಿಸಿಸ್ ಥ್ರೂ ಡೀಪ್ ಲರ್ನಿಂಗ್ ಆಂಡ್ ನಾಲೆಜ್ ರೆಲಿಗೇಷನ್ ಯೂಸಿಂಗ್ ಗ್ರಾಫ್ ಡೇಟಾ ಸೈನ್ಸ್” (“Framework on Accelerating Image Analysis Through Deep Learning and Knowledge Relegation using Graph Data Science”) ಎಂಬ ಸಂಶೋಧನಾ ಪ್ರಬಂಧವನ್ನು ಬೆಳ್ಳಿಪಾಡಿ ಡಾ. ಶಮಂತ್ ರೈ ಅವರ ಮಾರ್ಗದರ್ಶನದಲ್ಲಿ ಮಂಡಿಸಿ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.

​ಇವರು ತಮ್ಮ B.E. ಪದವಿಯನ್ನು ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾಹಿತಿ ವಿಜ್ಞಾನ ವಿಭಾಗದಲ್ಲಿ ಪೂರೈಸಿದ್ದು, ನಂತರ ನಿಟ್ಟೆಯ ಎನ್.ಎಂ.ಎ.ಎಂ. ತಾಂತ್ರಿಕ ಮಹಾವಿದ್ಯಾಲಯದಿಂದ (NMAMIT) ಗಣಕ ವಿಜ್ಞಾನ ವಿಭಾಗದಲ್ಲಿ ಎಂ.ಟೆಕ್ (M.Tech) ಪದವಿಯನ್ನು ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸುತ್ತಾರೆ.

​ಡಾ. ಅಖಿಲಾ ತೇಜಸ್ವಿ ಆರ್. ಅವರು ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ (Information Science and Engineering) ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೋಧನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಇವರು ಒಟ್ಟು 17 ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ.

ಇವರ ಅನೇಕ ಸಂಶೋಧನಾ ಪ್ರಬಂಧಗಳು ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ (Journals) ಪ್ರಕಟಗೊಂಡಿವೆ. ಅಲ್ಲದೆ, ಇವರು 3 ಭಾರತೀಯ ಪೇಟೆಂಟ್‌ಗಳನ್ನು (Indian Patents) ಸಹ ಪಡೆದಿದ್ದಾರೆ. ​ಇತ್ತೀಚೆಗೆ ನಡೆದ IEEE PhD Research Scholars Colloquium – 2025 ರಲ್ಲಿ ಇವರಿಗೆ ‘ಅತ್ಯುತ್ತಮ ಪ್ರಬಂಧ ಮಂಡನೆ’ (Best Presentation) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

​ಡಾ. ಅಖಿಲಾ ತೇಜಸ್ವಿ ಆರ್. ಇವರು ನಾಡೇಲು ದಿ| ರವಿ ಪೂಜಾರಿ ಹಾಗೂ ಕುಸುಮಾವತಿ ದಂಪತಿಯ ಸುಪುತ್ರಿ. ಹಾಗೂ ಬೆಳ್ತಂಗಡಿ ತಾಲೂಕು ಪಾಡಿಪಿಲ್ಯ ಶರತ್ ಕುಮಾರ್ ಎ, ಅವರ ಧರ್ಮಪತ್ನಿ. ಅಖಿಲ ಅವರಿಗೆ ಕು|ಗ್ಯಾನ್ವಿ, ಕು| ಐಶಿನಿ ಎಂಬ ಇಬ್ಬರು ಮಕ್ಕಳಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya
error: Content is protected !!