25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ಗುರುವಾಯನಕೆರೆ: ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಬೆಂಗಳೂರಿನ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ಹೇಳಿದರು.

ಅವರು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮಕ್ಕಳು ನಮ್ಮ ದೇಶದ ಭವಿಷ್ಯ . ಅವರಿಗೆ ನಮ್ಮ ಸಂಸ್ಕೃತಿಯ ಅರಿವಿರಬೇಕು. ದೇಶೀಯ ಹಬ್ಬ ಹರಿದಿನಗಳ ಮಹತ್ವ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಎಲ್ಲಾ ಹಬ್ಬಗಳನ್ನು ನಾವು ಆಚರಿಸುತ್ತೇವೆ ಎಂದರು. .

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಅವರು ಯುಗಾದಿಯ ಸಂದೇಶ ನೀಡಿದರು. ಅತಿಥಿಗಳಾದ ನಾಗರಾಜ್ ಹಾಗೂ ಸುರೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಪ್ರಸ್ತಾವಿಕ ಮಾತನಾಡಿ,ಸ್ವಾಗತಿಸಿದರು.
ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿ, ವಂದಿಸಿದರು. ಸಮಾರಂಭದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಯುಗಾದಿ ಸಂಭ್ರಮದ ಸವಿನೆನಪಿಗೆ ಬೇವು ಬೆಲ್ಲ ನೀಡಲಾಯಿತು.

Related posts

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!