September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

ಗುರುವಾಯನಕೆರೆ: ಭಾರತೀಯ ಪರಂಪರೆ ಕೃಷಿಯ ಜೊತೆಗೆ ನಂಟು ಹೊಂದಿದೆ. ಹೀಗಾಗಿ ಬೇಸಾಯಕ್ಕೆ ಮುನ್ನುಡಿ ಬರೆಯುವ, ವಸಂತ ಋತುವಿನ ಯುಗಾದಿ ನಮಗೆಲ್ಲಾ ಹೊಸ ವರ್ಷವಾಗಿದೆ. ಇಂಥ ಹಬ್ಬಗಳ ಮಹತ್ವವನ್ನು ತಿಳಿಯ ಪಡಿಸುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದುದು ಎಂದು ಬೆಂಗಳೂರಿನ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜ್ ಹೇಳಿದರು.

ಅವರು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮಾತನಾಡಿ, ಮಕ್ಕಳು ನಮ್ಮ ದೇಶದ ಭವಿಷ್ಯ . ಅವರಿಗೆ ನಮ್ಮ ಸಂಸ್ಕೃತಿಯ ಅರಿವಿರಬೇಕು. ದೇಶೀಯ ಹಬ್ಬ ಹರಿದಿನಗಳ ಮಹತ್ವ ತಿಳಿಯಬೇಕು ಎನ್ನುವ ನಿಟ್ಟಿನಲ್ಲಿ ಎಲ್ಲಾ ಹಬ್ಬಗಳನ್ನು ನಾವು ಆಚರಿಸುತ್ತೇವೆ ಎಂದರು. .

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಆಡಳಿತಾಧಿಕಾರಿ ಶಾಂತಿರಾಜ್ ಜೈನ್ ಅವರು ಯುಗಾದಿಯ ಸಂದೇಶ ನೀಡಿದರು. ಅತಿಥಿಗಳಾದ ನಾಗರಾಜ್ ಹಾಗೂ ಸುರೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಪ್ರಸ್ತಾವಿಕ ಮಾತನಾಡಿ,ಸ್ವಾಗತಿಸಿದರು.
ಉಪನ್ಯಾಸಕಿ ಅನನ್ಯ ಜೈನ್ ನಿರೂಪಿಸಿ, ವಂದಿಸಿದರು. ಸಮಾರಂಭದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಯುಗಾದಿ ಸಂಭ್ರಮದ ಸವಿನೆನಪಿಗೆ ಬೇವು ಬೆಲ್ಲ ನೀಡಲಾಯಿತು.

Related posts

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!