ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಕೇಸರಿ ಸೇವಾ ಟ್ರಸ್ಟ್ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.






