September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.

ಅತಿಥಿಗಳಾಗಿ ಅಖಿಲ ಕರ್ನಾಟಕ ಜನಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಬದುಕು ಸಣ್ಣದು.ಅದನ್ನು ರುಚಿಕರ ಮಾಡುವುದು ವಿದ್ಯಾರ್ಥಿಗಳಾದ ನಿಮ್ಮ ಕೈಲಿ ಇದೆ. ಉತ್ತಮ ಸಂಸ್ಕಾರ ಕೊಟ್ಟಷ್ಟು ಬದುಕು ಬೆಲೆ ಬಾಳುತ್ತದೆ. ಮಾದಕ ವ್ಯಸನಗಳು ಮಜಾ ಅಲ್ಲ ಅದು ಸಜಾ ಎಂದು ತಿಳಿಯಬೇಕು. ಶರೀರ ಎಂಬುದು ಒಂದು ಫ್ಯಾಕ್ಟರಿಯ ಹಾಗೆ. ಹೀಗಿರುವಾಗ ಆಹಾರ ನಮ್ಮನ್ನು ಉಳಿಸಿ ಬೆಳೆಸಿ ಶಕ್ತಿ ಕೊಡುವ ಹಾಗಿರಬೇಕು. ಮಕ್ಕಳ ಆಟ ಮನೆಯ ಜಗಲಿಯ ಮೇಲೆ ಇರಬೇಕು. ಮೊಬೈಲ್ನಲ್ಲಿ ಅಲ್ಲ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಾಟಕ ನಿರ್ದೇಶಕ ಯಶವಂತ್ ಬೆಳ್ತಂಗಡಿ ಉಪಸ್ಥಿತರಿದ್ದರು. ಭಾರ್ಗವಿ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಸ್ವಾಗತಿಸಿ, ಅರ್ಘ್ಯ ಅತಿಥಿಗಳ ಕಿರುಪರಿಚಯ ಮಾಡಿ ಕಲ್ಪಿತ ಧನ್ಯವಾದವಿತ್ತರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಆರೋಗ್ಯ ಅರಿವು ಮತ್ತು ಆಟಿದ ಕಮ್ಮೆನ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!