September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

ಬೆಳ್ತಂಗಡಿ : ಏಪ್ರಿಲ್ ತಿಂಗಳಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಫಾಯಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಅವರನ್ನು ನಿಯೋಗ ಭೇಟಿ ಮಾಡಿ ದ.ಕ. ಜಿಲ್ಲೆಯ 251 ಗ್ರಾಮಪಂಚಾಯತ್ ಗಳಲ್ಲಿ
ದುಡಿಯುತ್ತಿರುವ ಪೌರ ಕಾರ್ಮಿಕರ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಪ್ರಮುಖ ಬೇಡಿಕೆಗಳನ್ನು, ಮುಂದಿಡಲಿದ್ದೇವೆ ಎಂದು ದಲಿತ ಮುಖಂಡ, ದಕ ಜಿಲ್ಲಾ ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಎಸ್ .ಪಿ. ಆನಂದ್ ತಿಳಿಸಿದರು.

ಅವರು ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾ ಪಂ ವ್ಯಾಪ್ತಿಯ ಡಂಪಿಂಗ್ ಯಾರ್ಡ್ ಗೆ ಭೇಟಿ ನೀಡಿ ಇಲ್ಲಿನ ಸ್ವಚ್ಛತಾ ಕಾರ್ಮಿಕರ ಕುಂದು‌ಕೊರತೆಗಳ ಮಾಹಿತಿ ಪಡೆದು ಮಾತನಾಡಿದರು.
ಪ.ಪಂ ಗ್ರಾ ಪಂ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಅಥವಾ ಸ್ವಚ್ಛತಾ ಕಾರ್ಮಿಕರಿಗಾಗಿ ಸಂಬಂಧಪಟ್ಟ ಸ್ಥಳೀಯ ಆಡಳಿತಗಳು ಒದಗಿಸಬೇಕಾದ ಮೂಲಭೂತ ಸೌಲಭ್ಯಗಳಾದ ನ್ಯಾಯಯುತ ವೇತನ
ಇಎಸ್ ಐ, ಪಿ.ಎಫ್. ಆರೋಗ್ಯ ಕಾರ್ಡ್ ಆರೋಗ್ಯ ಸೌಲಭ್ಯ, ಆರೋಗ್ಯ ತಪಾಸಣೆ, ಕೆಲಸದ ಸ್ಥಳಗಳಲ್ಲಿ ಶೌಚಾಲಯ ಸಹಿತ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.


ಪೌರ ಕಾರ್ಮಿಕರು, ಸ್ವಚ್ಛತಾ ಸಿಬ್ಬಂದಿಗಳು ಕೆಲಸದ ಅವಧಿಯಲ್ಲಿ ಮಾಸ್ಕ್, ಗ್ಲೌಸ್ ಇತ್ಯಾದಿ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಸಲಹೆ ನೀಡಿದರು. ಪೌರ ಕಾರ್ಮಿಕರನ್ನು
ಗುತ್ತಿಗೆ ಆಧಾರದ ನೇಮಕಾತಿ ರದ್ದುಗೊಳಿಸಿ ಸ್ಥಳೀಯಾಡಳಿತಗಳಲ್ಲಿ‌ ನೇರವಾಗಿ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದು ಪೌರ ಕಾರ್ಮಿಕರು ಯಾವುದೇ ಗುಲಾಮಗಿರಿಗೆ ಬಲಿಯಾಗದಂತೆ ಎಚ್ವರವಹಿಸಬೇಕು, ಪೌರ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸಿ ಕನಿಷ್ಠ ವೇತನ ವ್ಯಾಪ್ತಿಗೊಳಪಡಿಸಿ
ಅತಂತ್ರ ಸ್ಥಿತಿಯಿಂದ ಮುಕ್ತಗೊಳಿಸಬೇಕು. ಯಾವುದೇ ಗ್ರಾಮಪಂಚಾಯತ್ ಗಳಲ್ಲಿ
ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ವಿನಾಕಾರಣ ಪೌರ ಕಾರ್ಮಿಕರಿಗೆ ಕೆಲಸದಿಂದ ತೆಗೆಯುವ ಬೆದರಿಕೆಯೊಡ್ಡಿ ಮಾನಸಿಕ ಕಿರುಕುಳ ನೀಡಿದಲ್ಲಿ ಇದರ ವಿರುದ್ಧ ಹೋರಾಟ ನಡೆಸುವುದಾಗಿ ಎಸ್ ಪಿ ಆನಂದ್ ಎಚ್ಚರಿಕೆ ನೀಡಿದರು.


ಪೌರ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಎಸ್ ಪಿ ಆನಂದ್
ಡಂಪಿಂಗ್ ಯಾರ್ಡ್ ಗಳಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರು, ಮಾಸ್ಕ್ , ಗ್ಲೌಸ್ ಧರಿಸಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆವಹಿಸಬೇಕು, ಅಲರ್ಜಿ ,ಚರ್ಮರೋಗ ಅಥವಾ ಕುಷ್ಠರೋಗದಂಥ ಸಾಂಕ್ರಾಮಿಕ ರೋಗಗಳ ಅಪಾಯವಿರುವುದರಿಂದ ಕೆಲಸದ ಸ್ಥಳದಿಂದ ಸ್ನಾನ ಮಾಡಿಕೊಂಡು ಮನೆಗೆ ತೆರಳಬೇಕು ಎಂದು ಮಾಹಿತಿ ನೀಡಿದರು.
ಪೌರ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಪ್ರಮುಖ ಬೇಡಿಕೆಗಳ
ಮನವಿ ಕೊಟ್ಟ ಬಳಿಕ‌ ವೇತನದಲ್ಲಿ ಸಣ್ಣ ಮಟ್ಟಿನಲ್ಲಿ ಏರಿಕೆಯಾಗಿರುವ ಬಗ್ಗೆ ಎಂದು ತಿಳಿಸಿದರು.
ಪೌರ ಕಾರ್ಮಿಕರು ಸಂಘಟಿತರಾಗಿ ಹೋರಾಟ ರೂಪಿಸಿದಲ್ಲಿ ಮಾತ್ರ ಕುಂದು ಕೊರತೆಗಳನ್ನು ಬಗೆಹರಿಸಿಕೊಂಡು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ ಎಂದು ಕರೆ ನೀಡಿದರು.


ಈ ಸಂದರ್ಭ ನಿಯೋಗವು ಲಾಯಿಲಾ ಗ್ರಾಮಪಂಚಾಯತ್ ಗೆ ಭೇಟಿ ನೀಡಿ ಪೌರ ಕಾರ್ಮಿಕರ ಸಮಸ್ಯೆಗಳ ಕುರಿತು‌ ಚರ್ಚಿಸಿದ್ದು
ಪಿಎಫ್, ಇಎಸ್ಐ, ಹೆಲ್ತ್ ಕಾರ್ಡ್,ಆರೋಗ್ಯ ತಪಾಸಣೆ, ಸುರಕ್ಷತಾ ಪರಿಕರಗಳೂ ಸೇರಿದಂತೆ ಸೌಲಭ್ಯಗಳು ವಿಳಂಬವಾಗಿದ್ದಲ್ಲಿ‌ ಕೂಡಲೇ ಒದಗಿಸಬೇಕೆಂದು ಒತ್ತಾಯಿಸಿದೆ. ಈ ಸಂದರ್ಭ ಬೆಳ್ತಂಗಡಿ ತಾಲೂಕು ಪೌರಕಾರ್ಮಿಕರ ಸಂಘದ
ಅಧ್ಯಕ್ಷ ಸುರೇಶ್ ಸುದೆಮುಗೇರು, ಸದಸ್ಯ, ಪ.ಪಂ ವಾಹನ ಚಾಲಕ ಶಿವಕುಮಾರ್ ಮತ್ತಿತರ ಸದಸ್ಯರು ಇದ್ದರು.

Related posts

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya
error: Content is protected !!