23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

ಮಡಂತ್ಯಾರುಪ್ರಾಥಮಿಕ ಕೃಷಿ ಪತ್ತಿನ ಸಹಕರಿ ಸಂಘ ಇದರ ವತಿಯಿಂದ ಮಡಂತ್ಯಾರು ಗ್ರಾಮ ಪಂಚಾಯತ್ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯತ್‌ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಾಗಿ ಸೇವೆ ಸಲ್ಲಿಸಿದ ಇವರನ್ನು ಗುರುತಿಸಿ ಗೌರವಿಸಲಾಯಿತು. ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅಭಿವೃದ್ಧಿ ಅಧಿಕಾರಿಗಳನ್ನು ಗೌರವಿಸಲಾಯಿತು.

ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಮಾತನಾಡಿ ಜನರಿಂದ ಚುನಾಯಿತರಾಗಿ ಜನರ ಸೇವೆಯನ್ನು ಸಲ್ಲಿಸಿ ಜನರ ಪ್ರೀತಿಗೆ ಪಾತ್ರರಾದ ತಮಗೆಲ್ಲರಿಗೂ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಕಾಂತಪ್ಪಗೌಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೇಶಕರಾದ ಗಣೇಶ್ ಮೂಲ್ಯ, ಮಹಾಬಲ, ಕಿಶೋರ್ ಕುಮಾರ್, ಸುರೇಶ್ ಎಸ್, ಗೋಪಾಲಕೃಷ್ಣ ಕೆ., ಶ್ರೀಮತಿ ಧನಲಕ್ಷ್ಮಿ, ಅಮಿತಾ ಪ್ರಿಯಾ ಲೋಬೊ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು

ಸುರೇಶ ಎಸ್ ಕಾರ್ಯಕ್ರಮ ನಿರೂಪಿಸಿದರು.
✍️ ವರದಿ.ಹರ್ಷ ಬಳ್ಳಮಂಜ

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!