July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ಮಾ. 18 ರಿಂದ ಎ.2ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಅದರಂತೆ ಈಗಾಗಲೇ ಪರೀಕ್ಷೆ ನಡೆಯುತ್ತಿದೆ. ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾ. ೩೦ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 07 ಹೆಚ್‌ಹೆಚ್‌ಎಲ್ 2026 ದಿನಾಂಕ:26-03-2026 ರನ್ನಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31 ಮಂಗಳವಾರ ಬದಲಾಗಿ ಮಾ.30 ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿದೆ.

ಇದರಿಂದಾಗಿ ಮಾ.30ರಂದು ನಿಗಧಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾ. 31ರಂದು ಮಂಗಳವಾರ ಈಗಾಗಲೇ ನಿಗಧಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದು ಎಂದು ಮಂಡಳಿ ನಿರ್ದೇಶ ನೀಡಿದೆ.

Related posts

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya
error: Content is protected !!