July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಮಾರ್ಚ್ ತಿಂಗಳ ಸಾಮಾನ್ಯ ಸಭೆಯು ಹಾಗೂ ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ ಮಾ.25 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದ್ದರು. ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ ಅವರಿಂದ ಘಟಕ ಅಭಿವೃದ್ಧಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಯಿತು.

ವಲಯ ಉಪಾಧ್ಯಕ್ಷರು ಮಾತನಾಡಿ ಸಮಾಜದ ಒಳಿತಿಗಾಗಿ ಸುಸ್ಥಿರ ಪರಿಹಾರ ಯೋಜನೆ ಹಾಗೂ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಕಲ್ಪಿಸುವ ಕಾಬೀಲ್ ಯೋಜನೆ ಜಾರಿಗೊಳಿಸಲು ಸಲಹೆ ನೀಡಿದರು.

ಕೊಕ್ಕಡ ಕಪಿಲಾ ಘಟಕವು 10% ಬೆಳವಣಿಗೆಯನ್ನು ದಾಖಲಿಸಿದ್ದು, ಇದಕ್ಕಾಗಿ ಘಟಕದ ಅಧ್ಯಕ್ಷರನ್ನು ಅಭಿನಂದಿಸಿದರು. ಮುಂಬರುವ ವಲಯ ಮಟ್ಟದಲ್ಲಿ ಪುತ್ತೂರಿನಲ್ಲಿ ನಡೆಯುವ ಸಿ.ಎ.ಪಿ.ಪಿ. ಹಾಗೂ ಕಾಪುವಿನಲ್ಲಿ ನಡೆಯುವ ಕಡಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಣಯಿಸಲಾಯಿತು.

ಇದೇ ಸಂದರ್ಭದಲ್ಲಿ ಫಲ್ಗುಣಿ ಪ್ರಾಂತ್ಯದ ಸದಸ್ಯತ್ವದ ಬೆಳವಣಿಗೆಯಲ್ಲಿ ಧನಾತ್ಮಕ ಸಾಧನೆಗಾಗಿ ವಲಯ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಜಸ್ವಂತ್ ಪಿರೇರಾ, ವಿಯೋನ್ ಸುವಾರಿಸ್, ಪ್ರಜ್ವಲ್ ಲೋಬೊ, ಜೋಸೆಫ್ ಪಿರೇರಾ ಮತ್ತು ಕೆ. ಶ್ರೀಧರ ರಾವ್ ಅವರಿಗೆ ಶುಭಾಶಯವನ್ನು ಸಲ್ಲಿಸಲಾಯಿತು.

ರಬೇತಿ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ‌., ಲೇಡಿ ಜೆಸಿ ಅಧ್ಯಕ್ಷೆ ರೇಶ್ಮಿ ಡಿಸೋಜ, ಜೆಸಿಂತಾ ಡಿಸೋಜ, ಧನುಷ್ ಕುಮಾರ್ ಜೈನ್, ವಿಕ್ಟರ್ ಸುವಾರಿಸ್, ಸಂತೋಷ್ ಜೈನ್, ಚಂದನಾ ಜೈನ್ ಹಾಗೂ ದಕ್ಷಾ ಜೈನ್ ಉಪಸ್ಥಿತರಿದ್ದರು.

ದೀಪಾ ವಿ. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya
error: Content is protected !!