September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಮಾರ್ಚ್ ತಿಂಗಳ ಸಾಮಾನ್ಯ ಸಭೆಯು ಹಾಗೂ ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ ಮಾ.25 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದ್ದರು. ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ ಅವರಿಂದ ಘಟಕ ಅಭಿವೃದ್ಧಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಯಿತು.

ವಲಯ ಉಪಾಧ್ಯಕ್ಷರು ಮಾತನಾಡಿ ಸಮಾಜದ ಒಳಿತಿಗಾಗಿ ಸುಸ್ಥಿರ ಪರಿಹಾರ ಯೋಜನೆ ಹಾಗೂ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಕಲ್ಪಿಸುವ ಕಾಬೀಲ್ ಯೋಜನೆ ಜಾರಿಗೊಳಿಸಲು ಸಲಹೆ ನೀಡಿದರು.

ಕೊಕ್ಕಡ ಕಪಿಲಾ ಘಟಕವು 10% ಬೆಳವಣಿಗೆಯನ್ನು ದಾಖಲಿಸಿದ್ದು, ಇದಕ್ಕಾಗಿ ಘಟಕದ ಅಧ್ಯಕ್ಷರನ್ನು ಅಭಿನಂದಿಸಿದರು. ಮುಂಬರುವ ವಲಯ ಮಟ್ಟದಲ್ಲಿ ಪುತ್ತೂರಿನಲ್ಲಿ ನಡೆಯುವ ಸಿ.ಎ.ಪಿ.ಪಿ. ಹಾಗೂ ಕಾಪುವಿನಲ್ಲಿ ನಡೆಯುವ ಕಡಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಣಯಿಸಲಾಯಿತು.

ಇದೇ ಸಂದರ್ಭದಲ್ಲಿ ಫಲ್ಗುಣಿ ಪ್ರಾಂತ್ಯದ ಸದಸ್ಯತ್ವದ ಬೆಳವಣಿಗೆಯಲ್ಲಿ ಧನಾತ್ಮಕ ಸಾಧನೆಗಾಗಿ ವಲಯ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಜಸ್ವಂತ್ ಪಿರೇರಾ, ವಿಯೋನ್ ಸುವಾರಿಸ್, ಪ್ರಜ್ವಲ್ ಲೋಬೊ, ಜೋಸೆಫ್ ಪಿರೇರಾ ಮತ್ತು ಕೆ. ಶ್ರೀಧರ ರಾವ್ ಅವರಿಗೆ ಶುಭಾಶಯವನ್ನು ಸಲ್ಲಿಸಲಾಯಿತು.

ರಬೇತಿ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ‌., ಲೇಡಿ ಜೆಸಿ ಅಧ್ಯಕ್ಷೆ ರೇಶ್ಮಿ ಡಿಸೋಜ, ಜೆಸಿಂತಾ ಡಿಸೋಜ, ಧನುಷ್ ಕುಮಾರ್ ಜೈನ್, ವಿಕ್ಟರ್ ಸುವಾರಿಸ್, ಸಂತೋಷ್ ಜೈನ್, ಚಂದನಾ ಜೈನ್ ಹಾಗೂ ದಕ್ಷಾ ಜೈನ್ ಉಪಸ್ಥಿತರಿದ್ದರು.

ದೀಪಾ ವಿ. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya
error: Content is protected !!