ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು

ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್ ವಿದ್ಯಾರ್ಥಿಗಳಿಗೆ ಹಲವಾರು ವಿಧದ ಕೃಷಿ ಸಂಬಂಧಿತ ಸಸ್ಯಗಳ ಪರಿಚಯ ಮಾಡಿಸಿದರು ಹಾಗೂ ಮನೆಯಲ್ಲಿಯೇ ಕೈತೋಟವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು

ಸಂಪನ್ಮೂಲ ವ್ಯಕ್ತಿ ಜಯರಾಮ್ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಅಧ್ಯಾಪಕ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಮತ್ತು ವಿವಿಧ ರೀತಿಯ ಹೂವಿನ ರಚನೆ ಮಾಡುವ ವಿಧಾನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ಟಿ ವಹಿಸಿದ್ದರು.
ಶಿಕ್ಷಕಿಯರಾದ ಪುಷ್ಪಲತಾ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು ಶಿಬಿರದ ಸಂಯೋಜನೆ ಶ್ರೀರಾಮ್ ಮತ್ತು ಲಲಿತಾ ಎಂ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು












