September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು.

ಅತಿಥಿಗಳಾಗಿ ಅಖಿಲ ಕರ್ನಾಟಕ ಜನಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್ ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಬದುಕು ಸಣ್ಣದು.ಅದನ್ನು ರುಚಿಕರ ಮಾಡುವುದು ವಿದ್ಯಾರ್ಥಿಗಳಾದ ನಿಮ್ಮ ಕೈಲಿ ಇದೆ. ಉತ್ತಮ ಸಂಸ್ಕಾರ ಕೊಟ್ಟಷ್ಟು ಬದುಕು ಬೆಲೆ ಬಾಳುತ್ತದೆ. ಮಾದಕ ವ್ಯಸನಗಳು ಮಜಾ ಅಲ್ಲ ಅದು ಸಜಾ ಎಂದು ತಿಳಿಯಬೇಕು. ಶರೀರ ಎಂಬುದು ಒಂದು ಫ್ಯಾಕ್ಟರಿಯ ಹಾಗೆ. ಹೀಗಿರುವಾಗ ಆಹಾರ ನಮ್ಮನ್ನು ಉಳಿಸಿ ಬೆಳೆಸಿ ಶಕ್ತಿ ಕೊಡುವ ಹಾಗಿರಬೇಕು. ಮಕ್ಕಳ ಆಟ ಮನೆಯ ಜಗಲಿಯ ಮೇಲೆ ಇರಬೇಕು. ಮೊಬೈಲ್ನಲ್ಲಿ ಅಲ್ಲ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ನಾಟಕ ನಿರ್ದೇಶಕ ಯಶವಂತ್ ಬೆಳ್ತಂಗಡಿ ಉಪಸ್ಥಿತರಿದ್ದರು. ಭಾರ್ಗವಿ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಸ್ವಾಗತಿಸಿ, ಅರ್ಘ್ಯ ಅತಿಥಿಗಳ ಕಿರುಪರಿಚಯ ಮಾಡಿ ಕಲ್ಪಿತ ಧನ್ಯವಾದವಿತ್ತರು.

Related posts

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya
error: Content is protected !!