22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ಮಾ. 18 ರಿಂದ ಎ.2ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಅದರಂತೆ ಈಗಾಗಲೇ ಪರೀಕ್ಷೆ ನಡೆಯುತ್ತಿದೆ. ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾ. ೩೦ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 07 ಹೆಚ್‌ಹೆಚ್‌ಎಲ್ 2026 ದಿನಾಂಕ:26-03-2026 ರನ್ನಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31 ಮಂಗಳವಾರ ಬದಲಾಗಿ ಮಾ.30 ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿದೆ.

ಇದರಿಂದಾಗಿ ಮಾ.30ರಂದು ನಿಗಧಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾ. 31ರಂದು ಮಂಗಳವಾರ ಈಗಾಗಲೇ ನಿಗಧಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದು ಎಂದು ಮಂಡಳಿ ನಿರ್ದೇಶ ನೀಡಿದೆ.

Related posts

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!