25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಮಾರ್ಚ್ ತಿಂಗಳ ಸಾಮಾನ್ಯ ಸಭೆಯು ಹಾಗೂ ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ ಮಾ.25 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದ್ದರು. ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ ಅವರಿಂದ ಘಟಕ ಅಭಿವೃದ್ಧಿ ಮತ್ತು ಆಡಳಿತ ನಿರ್ವಹಣೆ ತರಬೇತಿ ನಡೆಯಿತು.

ವಲಯ ಉಪಾಧ್ಯಕ್ಷರು ಮಾತನಾಡಿ ಸಮಾಜದ ಒಳಿತಿಗಾಗಿ ಸುಸ್ಥಿರ ಪರಿಹಾರ ಯೋಜನೆ ಹಾಗೂ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಕಲ್ಪಿಸುವ ಕಾಬೀಲ್ ಯೋಜನೆ ಜಾರಿಗೊಳಿಸಲು ಸಲಹೆ ನೀಡಿದರು.

ಕೊಕ್ಕಡ ಕಪಿಲಾ ಘಟಕವು 10% ಬೆಳವಣಿಗೆಯನ್ನು ದಾಖಲಿಸಿದ್ದು, ಇದಕ್ಕಾಗಿ ಘಟಕದ ಅಧ್ಯಕ್ಷರನ್ನು ಅಭಿನಂದಿಸಿದರು. ಮುಂಬರುವ ವಲಯ ಮಟ್ಟದಲ್ಲಿ ಪುತ್ತೂರಿನಲ್ಲಿ ನಡೆಯುವ ಸಿ.ಎ.ಪಿ.ಪಿ. ಹಾಗೂ ಕಾಪುವಿನಲ್ಲಿ ನಡೆಯುವ ಕಡಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಣಯಿಸಲಾಯಿತು.

ಇದೇ ಸಂದರ್ಭದಲ್ಲಿ ಫಲ್ಗುಣಿ ಪ್ರಾಂತ್ಯದ ಸದಸ್ಯತ್ವದ ಬೆಳವಣಿಗೆಯಲ್ಲಿ ಧನಾತ್ಮಕ ಸಾಧನೆಗಾಗಿ ವಲಯ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಮಾರ್ಚ್ ತಿಂಗಳಲ್ಲಿ ಹುಟ್ಟುಹಬ್ಬವನ್ನು ಆಚರಿಸಿದ ಜಸ್ವಂತ್ ಪಿರೇರಾ, ವಿಯೋನ್ ಸುವಾರಿಸ್, ಪ್ರಜ್ವಲ್ ಲೋಬೊ, ಜೋಸೆಫ್ ಪಿರೇರಾ ಮತ್ತು ಕೆ. ಶ್ರೀಧರ ರಾವ್ ಅವರಿಗೆ ಶುಭಾಶಯವನ್ನು ಸಲ್ಲಿಸಲಾಯಿತು.

ರಬೇತಿ ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ‌., ಲೇಡಿ ಜೆಸಿ ಅಧ್ಯಕ್ಷೆ ರೇಶ್ಮಿ ಡಿಸೋಜ, ಜೆಸಿಂತಾ ಡಿಸೋಜ, ಧನುಷ್ ಕುಮಾರ್ ಜೈನ್, ವಿಕ್ಟರ್ ಸುವಾರಿಸ್, ಸಂತೋಷ್ ಜೈನ್, ಚಂದನಾ ಜೈನ್ ಹಾಗೂ ದಕ್ಷಾ ಜೈನ್ ಉಪಸ್ಥಿತರಿದ್ದರು.

ದೀಪಾ ವಿ. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya
error: Content is protected !!