July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

ಉಜಿರೆ: ಸುಶಿಕ್ಷಿತ ಮಹಿಳೆ ಶಕ್ತಿಶಾಲಿ ಸಮಾಜದ ಮೂಲಸ್ತಂಭ ಎಂದು ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ವರ್ಷಾ ಬಾಳಿಗ ಬಣ್ಣಿಸಿದರು.

ಅವರು ಉಜಿರೆ ಶ್ರೀ ಧ.ಮಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಮಾ.25ರಂದು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

“ಮಹಿಳೆಯರು ಸುಶಿಕ್ಷಿತರಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮದೇ ಆದ ಗುರುತು ಮೂಡಿಸುತ್ತಿದ್ದಾರೆ. ಶಿಕ್ಷಣ, ವಿಜ್ಞಾನ, ಕಲೆ, ಕ್ರೀಡೆ ಸಹಿತ ಎಲ್ಲ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದ್ದು, ಸಮಾಜದ ಬೆಳವಣಿಗೆಗೆ ಕಾರಣೀಭೂತರಾಗುತ್ತಿದ್ದಾರೆ. ಆದುದರಿಂದ ಉತ್ತಮ ವಿದ್ಯಾಭ್ಯಾಸ ಮಾಡಿ ಜೀವನ ರೂಪಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಿ” ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., “ನಮ್ಮ ಕಾಲೇಜು ವಿದ್ಯಾರ್ಥಿನಿಯರು ಕೇವಲ ಪಾಠಪುಸ್ತಕಗಳಿಗೆ ಸೀಮಿತವಾಗದೇ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿವಿಧ ಸ್ಪರ್ಧೆಗಳಲ್ಲೂ ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಈ ಸಾಧನೆಗಳ ಹಿಂದೆ ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲ ಮಹತ್ವದ್ದು” ಎಂದರು.

“ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಫ್ಯಾಶನ್ ಡಿಸೖನ್ ತರಬೇತಿ ಅಥವಾ ಕಂಪ್ಯೂಟರ್ ಶಿಕ್ಷಣವು ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಮತ್ತು ಶೇ.100 ಉದ್ಯೋಗಾವಕಾಶ ಅಥವಾ ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯಕವಾಗುತ್ತದೆ. ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಮೂಡಿಸುವ, ಅವರನ್ನು ವಿದ್ಯಾವಂತ ಮತ್ತು ಸ್ವಾವಲಂಬಿ ನಾಗರಿಕರನ್ನಾಗಿ ರೂಪಿಸುವ ಆಶಯ ನಮ್ಮದು. ಇಲ್ಲಿನ ವಿದ್ಯಾರ್ಥಿನಿಯರ ಸಾಧನೆಗಳು ಇತರರಿಗೆ ಪ್ರೇರಣೆಯಾಗಲಿ” ಎಂದು ಆಶಿಸಿದರು. ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು. ಕಿರಿಯ ತರಬೇತಿ ಅಧಿಕಾರಿಗಳಾದ ನಿಧಿ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಸುಮಂಗಲಾ ಜೈನ್ ವಂದಿಸಿದರು.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ದಿ| ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಸ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

Suddi Udaya

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
error: Content is protected !!