22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ಮಾ. 18 ರಿಂದ ಎ.2ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಅದರಂತೆ ಈಗಾಗಲೇ ಪರೀಕ್ಷೆ ನಡೆಯುತ್ತಿದೆ. ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾ. ೩೦ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 07 ಹೆಚ್‌ಹೆಚ್‌ಎಲ್ 2026 ದಿನಾಂಕ:26-03-2026 ರನ್ನಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31 ಮಂಗಳವಾರ ಬದಲಾಗಿ ಮಾ.30 ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿದೆ.

ಇದರಿಂದಾಗಿ ಮಾ.30ರಂದು ನಿಗಧಿಪಡಿಸಲಾಗಿದ್ದ ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾ. 31ರಂದು ಮಂಗಳವಾರ ಈಗಾಗಲೇ ನಿಗಧಿಪಡಿಸಿರುವ ಅವಧಿಯಲ್ಲಿ ನಡೆಸಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯುವುದು ಎಂದು ಮಂಡಳಿ ನಿರ್ದೇಶ ನೀಡಿದೆ.

Related posts

ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya
error: Content is protected !!