September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 38 ವರ್ಷ9 ತಿಂಗಳ ಕಾಲ ಸೇವೆ ಸಲ್ಲಿಸಿರುವ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಅವರು ಮಾ.31ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

1987ರಲ್ಲಿ ಬಳಂಜ ಗ್ರಾಮ ಪಂಚಾಯತಿಯ ಗುಮಾಸ್ತನಾಗಿ ಸರಕಾರಿ ಸೇವೆಗೆ ಪಾದಾರ್ಪಣೆ ಮಾಡಿದ ಇವರು 1998ರಲ್ಲಿ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿ ಬೆಳಾಲು ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಭಡ್ತಿಗೊಂಡು ನಂತರ ಮರೋಡಿ, ಬಳಂಜ, ಶಿಶಿಲ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸಿದರು. 2013ರಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ ಹೊಂದಿ ನಾರಾವಿ, ಸರಪಾಡಿ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸಿದರು. 2009ರಿಂದ 2016ರ ತನಕ ಬೆಳ್ತಂಗಡಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕನಾಗಿ ಕರ್ತವ್ಯ ನಿರ್ವಹಿಸಿದರು.

2018ರಿಂದ 2021ರವರೆಗೆ ಬಂಟ್ವಾಳ ತಾಲೂಕು ಪಂಚಾಯತಿಯಲ್ಲಿ ಸಹಾಯಕ ನಿರ್ದೇಶಕ ಮತ್ತು ಸಹಾಯಕ ಲೆಕ್ಕಧಿಕಾರಿಯಾಗಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಿದರು. 2021ರಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಅಧೀಕ್ಷಕರಾಗಿ ಮತ್ತು ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಹಲವಾರು ಲೇಖನಗಳು, ವರದಿಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಇವರು ವಿದ್ಯಾರ್ಥಿ ದಿಸೆಯಲ್ಲೇ ಬಳಂಜ ಗ್ರಾಮದ ಯುವಕ ಮಂಡಲದ ಅಧ್ಯಕ್ಷರಾಗಿ, ಶ್ರೀ ಪಂಚಲಿಂಗೇಶ್ವರ ದೇವಾಲಯದ ಉತ್ಸವ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಎ ಪದವಿ ಪಡೆದ ಇವರು ಬಳೆಂಜ ಗ್ರಾಮದ ದಿ.ಕೆ ಅನಂತರಾಜ ಹೆಗ್ಡೆ, ಶಾರದಮ್ಮ ದಂಪತಿಯ ಸುಪುತ್ರ. ಪತ್ನಿ ಪ್ರಮೀಳ, ಪುತ್ರಿ ಡಾ. ಪ್ರಶಂಸರೊಂದಿಗೆ ಬಳಂಜದಲ್ಲಿ ನೆಲೆಸಿದ್ದಾರೆ.

Related posts

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ: ರೂ. 655 ಕೋಟಿ ವ್ಯವಹಾರ, ರೂ 5.05 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ 18% ಡಿವಿಡೆಂಟ್

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya
error: Content is protected !!