ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಉತ್ಸವಗಳು ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ
ಇಂದು (ಮಾ.27ರಂದು) ಸಂಜೆ ಶ್ರೀ ಬಲಿ, ಭೂತಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಮಹಾ ಬ್ರಹ್ಮರಥೋತ್ಸವ ಜರುಗಲಿದೆ. ರಥಾರೋಹಣ ಪೂಜೆ, ಮಹೋತ್ಸವ, ಅವಭೃತ ಓಕುಳಿ ಮತ್ತು ಕ್ಷೇತ್ರದ ರಸ್ತೇಶ್ವರಿ ಮತ್ತು ಶ್ರೀ ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ರಥೋತ್ಸವದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಸಂಕೀರ್ತನೆ ಮತ್ತು ಸಾಂಸ್ಕೃತಿಕ ವೈಭವಗಳು ಜರುಗಲಿವೆ.












