September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ್ ರಾಮನವಮಿ ಆಚರಣೆ ಮಾಡಲಾಯಿತು.

ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನೆ, ಸ್ತೋತ್ರ ಪಾರಾಯಣವನ್ನು ಯೋಗ ಬಂಧುಗಳು ನಡೆಸಿಕೊಟ್ಟರು. ಭಾರತಿ ಎಂ. ಎಲ್, ಅರುಣಾ,ಪದ್ಮಲತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.

ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀರಾಮಚಂದ್ರನ ಆದರ್ಶಗುಣಗಳ ಬಗ್ಗೆ ಬೌದ್ಧಿಕ ನೀಡಿ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರನ ಆದರ್ಶ ಗುಣಗಳ ಪಾಲನೆಯನ್ನು ಮಾಡುವುದರಿಂದ ಶಾಂತಿ ಮತ್ತು ನೆಮ್ಮದಿಯನ್ನು ಕಾಣಬಹುದೆಂದು ತಿಳಿಸಿದರು.

ಅಶೋಕ ಆಚಾರ್ಯ ಪ್ರಸಾದ ವ್ಯವಸ್ಥೆ ಮಾಡಿದ್ದರು. ವರದಿ ಪ್ರಮುಖ ಕೇಶವ ಪೂಜಾರಿ ಸ್ವಾಗತಿಸಿ ಸತೀಶ್ ಭಂಡಾರಿ ನಾಳ ವಂದಿಸಿದರು.

Related posts

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!