July 24, 2026
ಚಿತ್ರ ವರದಿವರದಿ

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

ಕಾಸರಗೋಡು: ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ ಮಾರ್ಚ್ 28ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ಜರಗಲಿದೆ. ಅಪರಾಹ್ನ 2.30ಕ್ಕೆ ಚುಟುಕು ಸಾಹಿತ್ಯ ಪರಿಷತ್ ಕೇಂದ್ರಸಮಿತಿ ಪ್ರಧಾನ ಸಂಚಾಲಕ ಡಾ. ಎಂ.ಜಿ.ಆರ್ ಅರಸ್ ಮೈಸೂರು ಉದ್ಘಾಟಿಸುವರು.ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸುವರು. ರಾಧಾಕೃಷ್ಣ. ಕೆ. ಉಳಿಯತಡ್ಕ ದಿಕ್ಸೂಚಿ ಭಾಷಣ ಮಾಡುವರು. ನಗರ ಸಭಾ ಸದಸ್ಯೆ ಶಾರದಾ.ಬಿ, ಸಾಹಿತಿ ಹರೀಶ್ ಸುಲಾಯ ಒಡ್ಡಂಬೆಟ್ಟು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕಾಸರಗೋಡು- ಕರ್ನಾಟಕ ಚುಟುಕು ವಾಚನ ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಕವಿ ವೆಂಕಟಭಟ್ ಎಡನೀರು ವಹಿಸುವರು. ಸಾಹಿತಿ ಗುಣಾಜೆ ರಾಮಚಂದ್ರಭಟ್ ಮತ್ತು ಡಾ. ವಾಣಿಶ್ರೀ ಕಾಸರಗೋಡು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾಸರಗೋಡು ಮತ್ತು ಕರ್ನಾಟಕ ಕವಿಗಳು ಚುಟುಕುಗಳನ್ನು ವಾಚಿಸುವರು. ವಿರಾಜ್ ಅಡೂರು ಕಾರ್ಯಕ್ರಮ ನಿರೂಪಿಸುವರು.

Related posts

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya
error: Content is protected !!