24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಸಹಾಯಾರ್ಥಕ್ಕಾಗಿ ಪಂದ್ಯಾಟ ಖ್ಯಾತ ದೈವರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮಾ.28ರಂದು ಸಂಜೆ ಕೊಡಮಣಿತ್ತಾಯ ದೈವದ ಆವರಣ ಬಳಂಜದಲ್ಲಿ ನಡೆಯಲಿದೆ.

ಕ್ರೀಡಾಂಗಣದ ಉದ್ಘಾಟನೆಯನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ ಸಂಸ್ಥೆಯ ಮಾಲಕ ನಾಗೇಶ್ ಬರಾಯ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗುಜರಾತ್ ಮೇ| ದ್ವಾರಕಾ ರೆಸ್ಟೋರೆಂಟ್ ಮಾಲಕ ಶೇಖರ್ ದೇವಾಡಿಗ ಪಾಲಬೆ ನೆರವೇರಿಸಲಿದ್ದಾರೆ.

ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್‌ ಪೂಂಜ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ.ಪುಷ್ಪಗಿರಿ, ಶೀತಲ್ ಪಡಿವಾಳ್‌ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಬಹುಮಾನಗಳು: ಪ್ರಥಮ- 12000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ದ್ವಿತೀಯ- 7000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ತೃತೀಯ- 3000 ನಗದು ಹಾಗೂ ಶ್ರೀ ಮಾತಾ ಟ್ರೋಫಿ, ಚತುರ್ಥ 3000 ನಗದು ಹಾಗೂ ಶ್ರೀ ಮಾತಾ ಟ್ರೋಫಿ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವತಿಯಿಂದ ಸಾಹಿತಿ ಡಾ. ಎಸ್ ಎಲ್ ಭೈರಪ್ಪರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!